ಶಿವಮೊಗ್ಗದ ಎಫ್ಎಂ ಇನ್ನು ಮೊಬೈಲ್ನಲ್ಲಿಯೂ ಲಭ್ಯ
ಶಿವಮೊಗ್ಗ, ಜನವರಿ 24: ಶಿವಮೊಗ್ಗದ ರೆಡಿಯೋ ಕಾರ್ಯಕ್ರಮಗಳನ್ನು ಕೆಲವೇ ದಿನಗಳಲ್ಲಿ ಸುಮಾರು 100 ಕಿ.ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡೇಟಾ ಕೇಬಲ್ಗಳ ಸಹಾಯವಿಲ್ಲದೇ ಆಲಿಸಬಹುದಾಗಿದೆ. ಅಲ್ಲದೇ ಜನರು ತಮ್ಮ ಮೊಬೈಲ್ ಪೋನ್ಗಳಲ್ಲಿಯೂ ಶಿವಮೊಗ್ಗದ ಎಫ್ಎಂ ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಈ ಕುರಿತು ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಮಾಹಿತಿಯನ್ನು ನೀಡಿದ್ದಾರೆ.
ಶಿವಮೊಗ್ಗ ನಗರದ ಎಂ.ಆರ್.ಎಸ್.ಸಮೀಪದ ದೂರದರ್ಶನ ಮರುಪ್ರಸಾರ ಕೇಂದ್ರದಲ್ಲಿ ಎಫ್ಎಂ ರೆಡಿಯೋ ಆರಂಭಿಸಲು ಕೆನಡಾದಿಂದ ತರಿಸಲಾಗಿದ್ದ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್ಮೀಟರ್ ಅಳವಡಿಕೆ ಹಾಗೂ ಪೂಜಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಪಾಲ್ಗೊಂಡಿದ್ದರು.

ಬಿ. ವೈ. ರಾಘವೇಂದ್ರ ಮಾತು: ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, "ಪ್ರಸ್ತುತ ಭದ್ರಾವತಿ ಕೇಂದ್ರದಲ್ಲಿ 1 ಕಿ. ವ್ಯಾ. ಸಾಮರ್ಥ್ಯದ ಟ್ರಾನ್ಸ್ಮೀಟರ್ ಅಳವಡಿಸಲಾಗಿದೆ. ನಗರದ ಈ ನೂತನ ಪ್ರಸಾರ ಕೇಂದ್ರದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕೆನಡಾದಿಂದ ತರಿಸಿರುವ 10 ಕಿ. ವ್ಯಾ. ಸಾಮರ್ಥ್ಯದ ಟ್ರಾನ್ಸಿಸ್ಟರ್ ಅಳವಡಿಸಲಾಗುತ್ತಿದೆ" ಎಂದರು.
"ಇನ್ನು ಕೆಲವೇ ದಿನಗಳಲ್ಲಿ ಸುಮಾರು 100 ಕಿ. ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡೇಟಾ ಕೇಬಲ್ಗಳ ಸಹಾಯವಿಲ್ಲದೇ ರೆಡಿಯೋ ಕಾರ್ಯಕ್ರಮ ಆಲಿಸಬಹುದಾಗಿದೆ. ಅಲ್ಲದೇ ತಮ್ಮ ಮೊಬೈಲ್ನಲ್ಲಿಯೂ ಎಫ್ಎಂ ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಎಫ್ಎಂ ಆರಂಭಗೊಳ್ಳುತ್ತಿರುವುದು ಶುಭ ಸಂಕೇತ" ಎಂದು ಹೇಳಿದರು.
ಸಚಿವ ಡಾ. ಎಲ್. ಮುರುಗನ್ ಮಾತನಾಡಿ, "ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್ಎಂ ರೆಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ಒದಗಿಸಿಕೊಟ್ಟು, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು" ಎಂದು ಭರವಸೆ ನೀಡಿದರು.
"ದೇಶದ ಎಲ್ಲಾ ಆಕಾಶವಾಣಿ ಕೇಂದ್ರಗಳನ್ನು ಜನರ ಆಶೋತ್ತರಗಳಿಗೆ ಪೂರಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಕಳೆದ ಸಾಲಿನಲ್ಲಿ 2500 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ತಂತ್ರಾಂಶಗಳನ್ನು ಅಳವಡಿಸಿದೆ" ಎಂದರು.
"ಪ್ರಸ್ತುತ ರಾಜ್ಯದ ಕೋಲಾರ, ರಾಣೆಬೆನ್ನೂರು, ಬೀದರ್ ಮತ್ತು ಉಡುಪಿ ಜಿಲ್ಲೆಗಳಿಗೂ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್ಮೀಟರ್ ಅಳವಡಿಸಲಾಗುತ್ತಿದೆ. ಇದರಿಂದಾಗಿ ಆಕಾಶವಾಣಿ ಕೇಂದ್ರಗಳು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸಲಿವೆ. ಕ್ರಿಯಾಶೀಲ ಸಂಸದ ಬಿ. ವೈ. ರಾಘವೇಂದ್ರ ಅವರ ಒತ್ತಾಸೆಯಂತೆ ಎಫ್ಎಂ ರೇಡಿಯೋ ಕೇಂದ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಸಹಕಾರವನ್ನು ನೀಡಲಾಗುವುದು" ಎಂದು ಸಚಿವರು ತಿಳಿಸಿದರು.
"ಆಕಾಶವಾಣಿಯು ಈ ದೇಶದ ಸಾಂಪ್ರದಾಯಿಕ, ಕಲೆ, ಸಾಹಿತ್ಯ, ಸಂಗೀತವನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಮಹತ್ವದ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಕಲಾವಿದರಿಗೆ ವೇದಿಕೆಗಳನ್ನು ಒದಗಿಸಿ, ಅವರ ಕಲೆಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ. ಇದರೊಂದಿಗೆ ಇಂದಿನ ಜನಾಂಗಕ್ಕೆ ಪೂರಕವಾದ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರಗೊಳಿಸಲು ಆಕಾಶವಾಣಿ ಬದ್ದವಾಗಿದೆ" ಎಂದು ಹೇಳಿದರು.
"ದೂರದ ಗುಡ್ಡ-ಬೆಟ್ಟ ಪ್ರದೇಶಗಳಲ್ಲಿಯೂ ಆಕಾಶವಾಣಿ ತನ್ನ ಇರುವಿಕೆಯನ್ನು ಮತ್ತೆ ಮತ್ತೆ ಪರಿಚಯಿಸಲಿದೆ. ಆಕಾಶವಾಣಿ ನಾಡಿನ ಸುದ್ದಿಗಳನ್ನು ಮಾತ್ರವಲ್ಲದೇ ಮನೋರಂಜನಾ ಮಾಧ್ಯಮವಾಗಿಯೂ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಜನರ ಸಂಪರ್ಕ ಮಾಧ್ಯಮವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರ ಮಾಡುವ ಮೂಲಕ ಪರಿಚಿತವಾಗಿದೆ" ಎಂದು ತಿಳಿಸಿದರು.
2024ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭದ್ರಾವತಿ ಆಕಾಶವಾಣಿ ಕೇಂದ್ರವನ್ನು 10 ಕಿಲೋ ವ್ಯಾಟ್ ಎಫ್ಎಂ ಪ್ರಸರಣ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಇದು ಶಿವಮೊಗ್ಗ ಜನರ ಬಹುದಿನದ ಬೇಡಿಕೆ ಆಗಿತ್ತು. 1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗದ ಭದ್ರಾವತಿ ಕೇಂದ್ರ 10 ಕಿಲೋ ವ್ಯಾಟ್ಗೆ ಅಭಿವೃದ್ಧಿಗೊಳ್ಳುತ್ತಿರುವುದು ಮಲೆನಾಡು ಭಾಗಕ್ಕೆ ಸಿಕ್ಕ ಗೌರವವಾಗಿತ್ತು.
ಸದ್ಯ ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆಕಾಶವಾಣಿ ಮತ್ತು ಎಫ್ಎಂ ರೆಡಿಯೋ ಸುಮಾರು 1 ಕೆವಿ ಟ್ರಾನ್ಸ್ಮೀಟರ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಉನ್ನತೀಕರಣದ ನಂತರ ಇದರ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಕಾರಿನಲ್ಲಿ ಸಂಚಾರ ನಡೆಸುವಾಗಲೂ ಎಫ್ಎಂ ಕೇಳಬಹುದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications