ಜಿಂಕೆ ಮಾಂಸ ಮಾರಾಟ: ಅರಣ್ಯಾಧಿಕಾರಿಗಳ ದಾಳಿ, ಬಂಧನ
ಶಿವಮೊಗ್ಗ, ಏಪ್ರಿಲ್ 05: ಎರಡು ಜಿಂಕೆಗಳನ್ನು ಭೇಟೆಯಾಡಿ, ಅದರ ಮಾಂಸ ಮಾರುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇನ್ನು ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆಂಪಿನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಎರಡು ಜಿಂಕೆಗಳನ್ನು ಭೇಟೆಯಾಡಿ ಅದರ ಮಾಂಸ ಮಾರಾಟ ಮಾಡಿದ್ದ ಸಂದರ್ಭದಲ್ಲಿ, ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಎರಡು ಜಿಂಕೆಗಳ ತಲೆಗಳು, ಎರಡು ಚರ್ಮ, ಎಂಟು ಕಾಲುಗಳು ಪತ್ತೆಯಾಗಿವೆ.
ಜೊತೆಗೆ ಕೆಂಪಿನಕೊಪ್ಪದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ, ಇನ್ನೂ ನಾಲ್ಕು ಜಿಂಕೆಗಳ ಚರ್ಮ, 8 ಜಿಂಕೆಗಳ ಕೊಂಬುಗಳು ಹಾಗೂ ಒಂದು ಕಾಡುಕೋಣದ ಕೊಂಬು ಪತ್ತೆಯಾಗಿದೆ.

ದಾಳಿ ವೇಳೆ ಜಮೀರ್ ಅಹಮದ್ ಎಂಬ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಹುವೇದ್ ಅಹಮದ್ ಸೇರಿದಂತೆ ಚಂದ್ರು, ರಾಘು, ಸಂತೋಷ್ ಪರಾರಿಯಾಗಿದ್ದಾರೆ.
ಹುವೇದ್ ಅಹಮದ್ ಎಂಬುವವರ ಫಾರ್ಮ್ ಹೌಸ್ ನಲ್ಲಿ ಜಿಂಕೆ ಚರ್ಮಗಳು, ಕೊಂಬು ಹಾಗೂ ಕಾಡುಕೋಣದ ಕೊಂಬು ಪತ್ತೆಯಾಗಿವೆ. ದಾಳಿಯಲ್ಲಿ ಡಿಎಫ್ಒ ಶಂಕರ್, ಎಸಿಎಫ್ ಬಾಲಚಂದ್ರ, ಆರ್ಎಫ್ಒ ಗಳಾದ ಸಂಜಯ್, ರವಿ ಹಾಗೂ ಸಿಬ್ಬಂದಿ ಇದ್ದರು. ಆಯನೂರು ವಲಯ ಅರಣ್ಯ ಕಚೇರಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications