ವೃದ್ಧರ ಮೇಲೆ ಮಾಜಿ ಶಾಸಕ ಶಿವರಾಮೇಗೌಡ ರೌಡಿಸಂ?
ಶಿವಮೊಗ್ಗ, ನವೆಂಬರ್ 11 : ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ನಾಗಮಂಗಲದ ಮಾಜಿ ಶಾಸಕ ಶಿವರಾಮೇಗೌಡ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ತುಣುಕೊಂದು ಸದ್ಯಕ್ಕೆ ಎಲ್ಲೆಡೆ ಹರಿದಾಡುತ್ತಿದೆ. ಹಲ್ಲೆಗೊಳಗಾದ ವೃದ್ಧರ ಮಗ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್.ಆರ್.ಶಿವರಾಮೇಗೌಡ ಆರೋಪ ನಿರಾಕರಿಸಿದ್ದಾರೆ.
ಈ ಪ್ರಕರಣದ ಸಂಬಂಧ ನಾಗಮಂಗಲದ ಮಾಜಿ ಶಾಸಕ ಶಿವರಾಮೇಗೌಡ ಸೇರಿದಂತೆ ಇಬ್ಬರ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಭದ್ರಾವತಿಯ ನಿಂಗಪ್ಪ ಎಂಬುವವರು ದೂರು ದಾಖಲಿಸಿದ್ದಾರೆ. ಶಿವಮೊಗ್ಗ ನಗರದ ಖಾಸಗಿ ಹೋಟೆಲ್ ನಲ್ಲಿ ಗುರುವಾರ ಬೆಟ್ಟೇಗೌಡ ಅವರ ಪುತ್ರಿ ಹಾಗೂ ನಾಗರಾಜ್ ಅವರ ಪುತ್ರನಿಗೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಈ ವೇಳೆ ಮಾಜಿ ಶಾಸಕ ಶಿವರಾಮೇಗೌಡ ಕೂಡ ಉಪಸ್ಥಿತರಿದ್ದರು.[ವಿಡಿಯೋ: ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಶಾಸಕ]

ನಿಂಗಯ್ಯ ಹಾಗೂ ಬೆಟ್ಟೇಗೌಡ ಮಧ್ಯೆ ಹಣಕಾಸಿನ ವ್ಯವಹಾರವಿದ್ದು, ನಿಂಗಯ್ಯ ಅವರು ನಿಶ್ಚತಾರ್ಥ ನಡೆಯುವ ಸ್ಥಳಕ್ಕೆ ಬಂದು ಹಣ ವಾಪಸ್ ನೀಡುವಂತೆ ಹೇಳಿದ್ದಾರೆ. ಈ ಸಮಯದಲ್ಲಿ ಇಬ್ಬರು ಮಧ್ಯೆ ಹೊಡೆದಾಟ ನಡೆದಿದ್ದು, ಮಾಜಿ ಶಾಸಕ ಶಿವರಾಮೇಗೌಡ ಕೂಡ ಸೇರಿ ಹಲ್ಲೆ ನಡೆಸಿದರು ಎಂದು ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಮೇಗೌಡ, ನಿಂಗಯ್ಯ ಮತ್ತು ಬೆಟ್ಟೇಗೌಡರ ಮಧ್ಯೆ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋಗಿದ್ದೆ, ನಾನಿಲ್ಲದಿದ್ದಿದ್ದರೆ ಅಲ್ಲಿ ಕೊಲೆಯೇ ನಡೆದು ಹೋಗುತ್ತಿತ್ತು, ಅವರಿಗೆ ಸಹಾಯ ಮಾಡಿದ ನನ್ನನ್ನೇ ಈಗ ದೂರುತ್ತಿದ್ದಾರೆ ಎಂದು ತಿಳಿಸಿದ್ದಾರೆ.[ರಮ್ಯಾ ಸೋಲಿಗೆ ಯಾರು ಕಾರಣ ಗೊತ್ತೆ?]
ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರನ್ನು ಹಲ್ಲೆಗೊಳಗಾದ ನಿಂಗಪ್ಪ ಅವರ ಮಗ ಆನಂದ್ ಅವಾಚ್ಯ ಶಬ್ದಗಳಿಂದ ಬಯ್ದಿದ್ದು, ಅವರಿಂದಲೇ ಈ ಎಲ್ಲ ಗಲಾಟೆ ನಡೆಯಿತು. ಅವರು ನನ್ನ ತಂದೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಗಾಯಾಳು ನಿಂಗಪ್ಪ ಅವರೇ ಈ ಬಗ್ಗೆ ಮಾತನಾಡಿದ್ದು, ನನ್ನನ್ನು ರೂಮಿನೊಳಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದರು ಎಂದು ಹೇಳಿದ್ದಾರೆ.
ಸದ್ಯಕ್ಕೆ ಗಾಯಾಳು ನಿಂಗಪ್ಪ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈಗ ಎಲ್ಲೆಡೆ ಹರಿದಾಡುತ್ತಿರುವ ವಿಡಿಯೋ ತುಣುಕಿನಲ್ಲಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರು ನಿಂಗಪ್ಪರನ್ನು ಬಲವಂತವಾಗಿ ರೂಮಿನೊಳಗೆ ನೂಕುತ್ತಿರುವ ದೃಶ್ಯ ಕಂಡುಬರುತ್ತದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications