ಸಾಗರ : ಟಿಕೆಟ್ ಗಲಾಟೆ, ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆ
ಶಿವಮೊಗ್ಗ, ನವೆಂಬರ್ 17 : ರೈಲ್ವೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಲಾಂಚ್ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ.
ಸಿಗಂದೂರಿನ ದೇವಸ್ಥಾನಕ್ಕೆ ಹೋಗಿದ್ದ ನಾಲ್ವರು ರೈಲ್ವೆ ಇಲಾಖೆ ಸಿಬ್ಬಂದಿ ಮೇಲೆ ಲಾಂಚ್ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸರಿಗೆ ಈ ಕುರಿತು ದೂರು ನೀಡುವುದಾಗಿ ಸಿಬ್ಬಂದಿಗಳು ಹೇಳಿದ್ದಾರೆ.
ಗುಡ್ ನ್ಯೂಸ್ : ಬೆಂಗಳೂರು ಮಂಗಳೂರು ನಡುವೆ ಹೊಸ ರೈಲು
ರೈಲ್ವೆ ಇಲಾಖೆ ಸಿಬ್ಬಂದಿಗಳಾದ ಬಸವರಾಜ್, ಚೇತನ್, ಹೇಮಂತ್ ಕುಮಾರ್, ಕಿರಣ್ ಮೇಲೆ ಹಲ್ಲೆ ನಡೆದಿದೆ. ಇವರೆಲ್ಲರೂ ರೈಲ್ವೆಯಲ್ಲಿ ಎಸಿ ಟೆಕ್ನಿಷಿಯನ್ ಹಾಗೂ ಅಸಿಸ್ಟೆಂಟ್ ಆಗಿ ಮೈಸೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗ ಕಾಮಗಾರಿ ಪೂರ್ಣ
ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಶರಾವತಿ ಹಿನ್ನೀರಿನ ಅಂಭಾರಗೊಡ್ಲು ದಡದಲ್ಲಿ ಈ ಘಟನೆ ನಡೆದಿದೆ. ಇಂತಹ ಸಾಕಷ್ಟು ಘಟನೆ ಈ ಭಾಗದಲ್ಲಿ ನಡೆದಿದ್ದು, ಸ್ಥಳದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಲ್ಲ.
ಪೊಲೀಸರನ್ನು ನೇಮಿಸಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನಕ್ಕೆ ಲಾಂಚ್ನಲ್ಲಿ ಸಾಗುವ ಪ್ರಯಾಣಿಕರು ಒತ್ತಾಯಿಸಿದ್ದಾರೆ.