ನನ್ನ ತಮ್ಮ 'ಮಧು' ಮಿನಿಸ್ಟರ್ ಆಗುತ್ತಾನೆ: ಗೀತಾ ಶಿವರಾಜ್ಕುಮಾರ್ ಹೇಳಿಕೆ
ಶಿವಮೊಗ್ಗ: 'ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದ್ದು, ನನ್ನ ತಮ್ಮ ಮಧು ಬಂಗಾರಪ್ಪ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಖಂಡಿತ ಸಚಿವನಾಗುತ್ತಾನೆ' ಎಂದು ಗೀತಾ ಶಿವರಾಜ್ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೊರಬದಲ್ಲಿ ಸಹೋದರ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಬಂಗಾರಪ್ಪ ಜಯಗಳಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮ್ಮನ ಗೆಲುವಿನ ಬಗ್ಗೆ ಮೊದಲೇ ಖಾತ್ರಿ ಇತ್ತು. ಸೊರಬ ಜನತೆ ಇಷ್ಟೊಂದು ಮತಗಳ ಅಂತರದಲ್ಲಿ ಗೆಲ್ಲಿಸಿರುವುದಕ್ಕೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

'ನಟ ಶಿವರಾಜ್ಕುಮಾರ್ ಹಾಗೂ ಸೊರಬದ ಮುಖಂಡರು ಮಾಡಿದ ಪ್ರಚಾರ, ತಂದೆ, ತಾಯಿಯ ಆಶೀರ್ವಾದ ಮಧು ಬಂಗಾರಪ್ಪ ಗೆಲುವಿಗೆ ನೆರವಾಗಿದೆ. ಇಲ್ಲಿ ಸತ್ಯ ಗೆದ್ದಿದೆ. ತಮ್ಮ ಮಧು ಹೇಳಿದ ಕಡೆಯೆಲ್ಲ ನಾನು ಪ್ರಚಾರ ಮಾಡಿದ್ದೆ' ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.
ಸೊರಬದಲ್ಲಿ ಬಿಜೆಪಿಯ ಕುಮಾರ್ ಬಂಗಾರಪ್ಪ 53794 ಮತಗಳನ್ನು ಗಳಿಸಿದ್ರೆ, ಮಧು ಬಂಗಾರಪ್ಪ 97932 ಮತಗಳನ್ನು ಪಡೆದು, ಸುಮಾರು 40 ಸಾವಿರ ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್ನಿಂದ ಬಿ.ಚಂದ್ರೇಗೌಡ ಹಾಗೂ ಎಎಪಿಯಿಂದ ಚಂದ್ರಶೇಖರ್ ಪ್ರತಿಸ್ಪರ್ಧಿಗಳಾಗಿದ್ದರು.
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದ ಮಧು ಬಂಗಾರಪ್ಪ, ಈ ಬಾರಿ ಕಾಂಗ್ರೆಸ್ನಿಂದ ಅದೃಷ್ಟ ಪರೀಕ್ಷೆಗೆ ಇಳಿದು ಯಶಸ್ವಿಯಾಗಿದ್ದಾರೆ. 224 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 132, ಬಿಜೆಪಿ 62 ಹಾಗೂ ಜೆಡಿಎಸ್ 19, ಇತರರು ನಾಲ್ಕು ಕ್ಷೇತ್ರದಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications