ನನ್ನ ತಮ್ಮ 'ಮಧು' ಮಿನಿಸ್ಟರ್ ಆಗುತ್ತಾನೆ: ಗೀತಾ ಶಿವರಾಜ್ಕುಮಾರ್ ಹೇಳಿಕೆ
ಶಿವಮೊಗ್ಗ: 'ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದ್ದು, ನನ್ನ ತಮ್ಮ ಮಧು ಬಂಗಾರಪ್ಪ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಖಂಡಿತ ಸಚಿವನಾಗುತ್ತಾನೆ' ಎಂದು ಗೀತಾ ಶಿವರಾಜ್ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೊರಬದಲ್ಲಿ ಸಹೋದರ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಬಂಗಾರಪ್ಪ ಜಯಗಳಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮ್ಮನ ಗೆಲುವಿನ ಬಗ್ಗೆ ಮೊದಲೇ ಖಾತ್ರಿ ಇತ್ತು. ಸೊರಬ ಜನತೆ ಇಷ್ಟೊಂದು ಮತಗಳ ಅಂತರದಲ್ಲಿ ಗೆಲ್ಲಿಸಿರುವುದಕ್ಕೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

'ನಟ ಶಿವರಾಜ್ಕುಮಾರ್ ಹಾಗೂ ಸೊರಬದ ಮುಖಂಡರು ಮಾಡಿದ ಪ್ರಚಾರ, ತಂದೆ, ತಾಯಿಯ ಆಶೀರ್ವಾದ ಮಧು ಬಂಗಾರಪ್ಪ ಗೆಲುವಿಗೆ ನೆರವಾಗಿದೆ. ಇಲ್ಲಿ ಸತ್ಯ ಗೆದ್ದಿದೆ. ತಮ್ಮ ಮಧು ಹೇಳಿದ ಕಡೆಯೆಲ್ಲ ನಾನು ಪ್ರಚಾರ ಮಾಡಿದ್ದೆ' ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.
ಸೊರಬದಲ್ಲಿ ಬಿಜೆಪಿಯ ಕುಮಾರ್ ಬಂಗಾರಪ್ಪ 53794 ಮತಗಳನ್ನು ಗಳಿಸಿದ್ರೆ, ಮಧು ಬಂಗಾರಪ್ಪ 97932 ಮತಗಳನ್ನು ಪಡೆದು, ಸುಮಾರು 40 ಸಾವಿರ ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್ನಿಂದ ಬಿ.ಚಂದ್ರೇಗೌಡ ಹಾಗೂ ಎಎಪಿಯಿಂದ ಚಂದ್ರಶೇಖರ್ ಪ್ರತಿಸ್ಪರ್ಧಿಗಳಾಗಿದ್ದರು.
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದ ಮಧು ಬಂಗಾರಪ್ಪ, ಈ ಬಾರಿ ಕಾಂಗ್ರೆಸ್ನಿಂದ ಅದೃಷ್ಟ ಪರೀಕ್ಷೆಗೆ ಇಳಿದು ಯಶಸ್ವಿಯಾಗಿದ್ದಾರೆ. 224 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 132, ಬಿಜೆಪಿ 62 ಹಾಗೂ ಜೆಡಿಎಸ್ 19, ಇತರರು ನಾಲ್ಕು ಕ್ಷೇತ್ರದಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications