Lok Sabha Elections: ರಂಗೇರಿದ ಶಿವಮೊಗ್ಗ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ ಮಕ್ಕಳ ಜಿದ್ದಾಜಿದ್ದಿಯ ಫೈಟ್
ಶಿವಮೊಗ್ಗ, ಮಾರ್ಚ್ 22: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ಲೋಕಾ ಅಖಾಡ ರಂಗೇರಿದೆ. . ಇಬ್ಬರು ಮಾಜಿ ಸಿಎಂಗಳ ಮಕ್ಕಳು ರಣಕಣದಲ್ಲಿದ್ದು, ಕ್ಷೇತ್ರದಲ್ಲಿ ಈಗಾಗಲೇ ಮಿಂಚಿನ ಪ್ರಚಾರ ಆರಂಭವಾಗಿದೆ.
ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಕೊಲ್ಲೂರು ಮೂಕಾಂಬಿಕೆಗೆ ಕೈ ಮುಗಿಯುವ ಮೂಲಕ ಪ್ರಚಾರ ಆರಂಭಿಸಿದ್ದಾರೆ. ಇನ್ನೊಂದೆಡೆ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ, ತನ ಹೇಳಿಕೆಗಳ ಮೂಲಕ ಕಾಂಗ್ರೆಸ್ ಎದುರಾಳಿಗೆ ಟಕ್ಕರ್ ನೀಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಬುಧವಾರ ಶಿವಮೊಗ್ಗದಲ್ಲಿ ಪ್ರಚಾರ ನಡೆಸಿ ಅಲ್ಲಿಂದ ನೇರ ಕೊಲ್ಲೂರು ಕ್ಷೇತ್ರಕ್ಕೆ ಬಂದು, ಇಂದು ಬೆಳಿಗ್ಗೆ ಪತಿ ಶಿವರಾಜ್ ಕುಮಾರ್ ಜೊತೆಗೆ ಪೂಜೆ ನಡೆಸಿ ಬೈಂದೂರಿನಲ್ಲಿ ಪ್ರಚಾರ ಆರಂಭಿಸಿದ್ದಾರೆ. ಬೈಂದೂರು ಭಾಗದಲ್ಲಿ ಮಾಜಿ ಸಿಎಂ ಬಂಗಾರಪ್ಪ ಅಭಿಮಾನಿಗಳು ಹೇರಳ ಸಂಖ್ಯೆಯಲ್ಲಿ ಇರುವುದರಿಂದ, ಹೊಸ ಚುನಾವಣಾ ಲೆಕ್ಕಾಚಾರದೊಂದಿಗೆ ಪ್ರಚಾರ ನಡೆಸಿದ್ದಾರೆ.
ಈ ಭಾಗದ ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಮಾಜಿ ಶಾಸಕ ಬಿ.ಎಂ ಸುಕುಮಾರಶೆಟ್ಟಿ, ಇದೀಗ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ, ಪಕ್ಷಕ್ಕೆ ಬೈಂದೂರಿನಲ್ಲಿ ಆನೆ ಬಲ ಬಂದಂತಾಗಿದೆ ಎಂದಿರುವ ಗೀತಾ ಶಿವರಾಜಕುಮಾರ್, ಸುಕುಮಾರ ಶೆಟ್ಟಿ ಮನೆಯಿಂದಲೇ ಪ್ರಚಾರ ಆರಂಭಿಸಿದ್ದಾರೆ.

ಇನ್ನೊಂದೆಡೆ ಹ್ಯಾಟ್ರಿಕ್ ಹೀರೋ ಶಿವಣ್ಣ, ಪ್ರಚಾರ ಕಾರ್ಯದಲ್ಲಿ ಪತ್ನಿಗೆ ಸಾಥ್ ನೀಡುತ್ತಿದ್ದು, ಈ ಬಾರಿ ಹೆಚ್ಚಿನ ಬಲದೊಂದಿಗೆ ಪ್ರಚಾರ ನಡೆಸುತ್ತಿದ್ದೇವೆ ಎಂದಿದ್ದಾರೆ. ಚಿತ್ರರಂಗದ ತಾಂತ್ರಿಕ ವರ್ಗದವರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿದ್ದು, ಅನೇಕ ನಟರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ.
ತನ್ನ ಯಾವುದೇ ಅಭಿಮಾನಿಗಳನ್ನು ನಾನು ಒತ್ತಾಯಿಸುವುದಿಲ್ಲ, ಆದರೆ ಅನೇಕ ನಟರು ಅಭಿಮಾನಿಗಳು ಗೀತಾಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ. ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದಾಗಿ ಶಿವಣ್ಣ ಹೇಳಿದ್ದಾರೆ.

ಇತ್ತ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಕೂಡ ಹೊಸ ಹುಮ್ಮಸಿನೊಂದಿಗೆ ಕಣಕ್ಕಿಳಿದಿದ್ದಾರೆ. ಪ್ರಧಾನಿ ಮೋದಿ ಅವರೇ ಬಂದು ತನ್ನ ಪರ ಪ್ರಚಾರ ಕೈಗೊಂಡಿರುವುದರಿಂದ, ಮೋದಿ ಶ್ರೀರಕ್ಷೆಯಲ್ಲಿ ಚುನಾವಣೆ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಇದು ರಾಷ್ಟ್ರಪ್ರೇಮಿಗಳು ಮತ್ತು ರಾಷ್ಟ್ರ ದ್ರೋಹಿಗಳ ನಡುವಿನ ಚುನಾವಣೆ ಎಂದು ಬಣ್ಣಿಸಿರುವ ರಾಘವೇಂದ್ರ, ಸೀಸನಲ್ ಪೋಲಿಟಿಷಿಯನ್ಗಳಿಂದ ಹೆಚ್ಚಿನ ನಿರೀಕ್ಷೆ ಮಾಡುವಂತಿಲ್ಲ ಎಂದು ಪರೋಕ್ಷವಾಗಿ ಗೀತಾ ಶಿವರಾಜ್ ಕುಮಾರ್ಗೆ ಟಕ್ಕರ್ ನೀಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರ 75,000ಕ್ಕೂ ಅಧಿಕ ಮತಗಳ ಲೀಡ್ ನೀಡುವ ಮೂಲಕ ಬಿಜೆಪಿಯ ಕೈ ಹಿಡಿದಿತ್ತು. ಆದರೆ ಈ ಬಾರಿ ಪ್ರಬಲ ನಾಯಕರ ಪಕ್ಷಾಂತರದಿಂದ ಬಿಜೆಪಿ ಲೆಕ್ಕಾಚಾರ ತಪ್ಪುವ ಸಾಧ್ಯತೆ ಇದೆ. ರಾಜ್ಯದ ಪ್ರತಿಷ್ಠಿತ ಕಣವಾಗಿರುವ ಶಿವಮೊಗ್ಗದಲ್ಲಿ, ಈಶ್ವರಪ್ಪ ಸ್ಪರ್ಧಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ. ಇದರಿಂದ ಬಿಜೆಪಿಗೆ ಮತ್ತಷ್ಟು ಹೊಡೆತ ಬಿದ್ದಂತಾಗುತ್ತದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಚುನಾವಣಾ ಲೆಕ್ಕಾಚಾರಗಳು ಏನಾಗಬಹುದು ಅನ್ನುವ ಕುತೂಹಲ ಮತದಾರರಲ್ಲಿದೆ.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications