ಗೀತಾ ಶಿವಣ್ಣ ಮಾಧ್ಯಮ ಸಂವಾದ ಹೈಲೈಟ್ಸ್
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು 'ಜೀವನ ಚೈತ್ರ' ಸಿನಿಮಾದಲ್ಲಿ "ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ, ಸಾಯೋ ತನಕ ಸಂಸಾರದೊಳಗೆ ಗಂಡಾಗುಂಡಿ...ಇರೋದರೊಳಗೆ ಒಮ್ಮೆ ನೋಡು ಜೋಗದ ಗುಂಡಿ" ಎಂದು ಹಾಡಿ ಜೋಗ ಜಲಪಾತದ ಮಹತ್ವವನ್ನು ಮತ್ತೊಮ್ಮೆ ಅಭಿಮಾನಿ ದೇವರುಗಳಿಗೆ ನೆನಪಿಸಿದ್ದರು.
ಇದೀಗ ಅವರ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಅದೇ ಜೋಗ ಜಲಪಾತ ಧುಮ್ಮಿಕ್ಕುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಮಾರ್ಚ್ 27ಕ್ಕೆ ಅವರು ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. [ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ಸಂದರ್ಶನ]

ತಮ್ಮ ತವರೂರು ಶಿವಮೊಗ್ಗದಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತಿರುವ ಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮುಖಾಮುಖಿಯಾದರು. ತಮ್ಮ ಪ್ರಬಲ ಸ್ಪರ್ಧಿ ಮಾಜಿ ಮುಖ್ಯಮಂತ್ರಿ ಹಳೆ ಹುಲಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಅವರು ಸೆಣೆಸುತ್ತಿರುವುದು ಅತೀವ ಕುತೂಹಲ ಕೆರಳಿಸಿದೆ.
ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವುದೇ ಚಾನಲ್, ಮಾಧ್ಯಮಗಳ ಜೊತೆ ಸಂವಾದ, ಸಂದರ್ಶನಕ್ಕೆ ಗೀತಾ ಬಂದವರೇ ಅಲ್ಲ. ಮಾಧ್ಯಮಗಳ ಜೊತೆಗಿನ ಸಂವಾದ ಅವರಿಗೆ ಇದೇ ಮೊದಲು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತನ್ನ ಮುದ್ದಿನ ಮಡದಿ ಜೊತೆ ಸಂವಾದದಲ್ಲಿ ಸಾಥ್ ನೀಡಿದರು.
ಪ್ರೆಸ್ ಕ್ಲಬ್ ಗೆ ಶಿವಣ್ಣ ಇದುವರೆಗೂ ಹೆಚ್ಚೆಂದರೆ ಒಂದೆರಡು ಬಾರಿ ಬಂದಿರಬಹುದಷ್ಟೆ. ಮೊದಲು ಮಾತನಾಡಿದ ಶಿವಣ್ಣ ತಮ್ಮ ಪತ್ನಿ ಯಾಕೆ ಸ್ಪರ್ಧಿಸುತ್ತಿದ್ದಾರೆ. ರಾಜಕೀಯಕ್ಕೆ ಅಡಿಯಿಟ್ಟಿದ್ಯಾಕೆ ಎಂದು ಹೇಳುತ್ತಾ ಗೀತಾ ಅವರಲ್ಲಿದ್ದ ಕೊಂಚ ದುಗುಡವನ್ನು ದೂರ ಮಾಡಿದರು. ಬನ್ನಿ ಶಿವಣ್ಣ ಏನು ಹೇಳಿದರು ಎಂಬುದನ್ನು ನೋಡೋಣ ಓವರ್ ಟು ಶಿವಣ್ಣ...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications