ಗೀತಾ ಶಿವಣ್ಣ ಮಾಧ್ಯಮ ಸಂವಾದ ಹೈಲೈಟ್ಸ್
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು 'ಜೀವನ ಚೈತ್ರ' ಸಿನಿಮಾದಲ್ಲಿ "ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ, ಸಾಯೋ ತನಕ ಸಂಸಾರದೊಳಗೆ ಗಂಡಾಗುಂಡಿ...ಇರೋದರೊಳಗೆ ಒಮ್ಮೆ ನೋಡು ಜೋಗದ ಗುಂಡಿ" ಎಂದು ಹಾಡಿ ಜೋಗ ಜಲಪಾತದ ಮಹತ್ವವನ್ನು ಮತ್ತೊಮ್ಮೆ ಅಭಿಮಾನಿ ದೇವರುಗಳಿಗೆ ನೆನಪಿಸಿದ್ದರು.
ಇದೀಗ ಅವರ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಅದೇ ಜೋಗ ಜಲಪಾತ ಧುಮ್ಮಿಕ್ಕುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಮಾರ್ಚ್ 27ಕ್ಕೆ ಅವರು ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. [ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ಸಂದರ್ಶನ]

ತಮ್ಮ ತವರೂರು ಶಿವಮೊಗ್ಗದಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತಿರುವ ಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮುಖಾಮುಖಿಯಾದರು. ತಮ್ಮ ಪ್ರಬಲ ಸ್ಪರ್ಧಿ ಮಾಜಿ ಮುಖ್ಯಮಂತ್ರಿ ಹಳೆ ಹುಲಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಅವರು ಸೆಣೆಸುತ್ತಿರುವುದು ಅತೀವ ಕುತೂಹಲ ಕೆರಳಿಸಿದೆ.
ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವುದೇ ಚಾನಲ್, ಮಾಧ್ಯಮಗಳ ಜೊತೆ ಸಂವಾದ, ಸಂದರ್ಶನಕ್ಕೆ ಗೀತಾ ಬಂದವರೇ ಅಲ್ಲ. ಮಾಧ್ಯಮಗಳ ಜೊತೆಗಿನ ಸಂವಾದ ಅವರಿಗೆ ಇದೇ ಮೊದಲು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತನ್ನ ಮುದ್ದಿನ ಮಡದಿ ಜೊತೆ ಸಂವಾದದಲ್ಲಿ ಸಾಥ್ ನೀಡಿದರು.
ಪ್ರೆಸ್ ಕ್ಲಬ್ ಗೆ ಶಿವಣ್ಣ ಇದುವರೆಗೂ ಹೆಚ್ಚೆಂದರೆ ಒಂದೆರಡು ಬಾರಿ ಬಂದಿರಬಹುದಷ್ಟೆ. ಮೊದಲು ಮಾತನಾಡಿದ ಶಿವಣ್ಣ ತಮ್ಮ ಪತ್ನಿ ಯಾಕೆ ಸ್ಪರ್ಧಿಸುತ್ತಿದ್ದಾರೆ. ರಾಜಕೀಯಕ್ಕೆ ಅಡಿಯಿಟ್ಟಿದ್ಯಾಕೆ ಎಂದು ಹೇಳುತ್ತಾ ಗೀತಾ ಅವರಲ್ಲಿದ್ದ ಕೊಂಚ ದುಗುಡವನ್ನು ದೂರ ಮಾಡಿದರು. ಬನ್ನಿ ಶಿವಣ್ಣ ಏನು ಹೇಳಿದರು ಎಂಬುದನ್ನು ನೋಡೋಣ ಓವರ್ ಟು ಶಿವಣ್ಣ...
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications