ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಸ್ಫೋಟ; ಮೃತಪಟ್ಟ 5 ಜನರ ಗುರುತು ಪತ್ತೆ

|
Google Oneindia Kannada News

ಶಿವಮೊಗ್ಗ, ಜನವರಿ 25 : ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿರುವ ಶಿವಮೊಗ್ಗದಲ್ಲಿ ನಡೆದ ಸ್ಫೋಟದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಸ್ಫೋಟದಲ್ಲಿ ಒಟ್ಟು 6 ಕಾರ್ಮಿಕರು ಮೃತಪಟ್ಟಿದ್ದಾರೆ. 5 ಜನರ ಗುರುತು ಪತ್ತೆಯಾಗಿದ್ದು, ಇನ್ನೊಂದು ಮೃತದೇಹದ ಗುರುತು ಇನ್ನು ಪತ್ತೆ ಹಚ್ಚಬೇಕಿದೆ.

ಜನವರಿ 21ರ ಗುರುವಾರ ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಕ್ರಷರ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರಗೊಂಡಿದ್ದವು.

ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು! ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು!

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಎಂ. ಶಾಂತರಾಜು ಅವರು ಮೃತಪಟ್ಟವರ ಬಗ್ಗೆ ಮಾಹಿತಿ ನೀಡಿದ್ದಾರೆ. "ಶವಗಳ ಮರಣೋತ್ತರ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ಕುಟುಂಬಗಳಿಗೆ ಹಸ್ತಾಂತರ ಮಾಡಲಾಗಿದೆ" ಎಂದು ಹೇಳಿದ್ದಾರೆ.

ಶಿವಮೊಗ್ಗ ಸ್ಫೋಟ; ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರೀಯ ದಳ ಶಿವಮೊಗ್ಗ ಸ್ಫೋಟ; ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರೀಯ ದಳ

Gelatin Sticks Blast 5 Dead Body Identified

ಮೃತಪಟ್ಟವರ ವಿವರ; ಸ್ಫೋಟದಲ್ಲಿ ಮೃತಪಟ್ಟವರನ್ನು ರಾಯದುರ್ಗದ ಪವನ್ ಕುಮಾರ್ (29), ಜಾವೀದ್ (28), ಚೆಲಿಮಾನು ರಾಜು (24), ಪ್ರವೀಣ (36) ಅಂತರಗಂಗೆ (ಭದ್ರಾವತಿ), ಮಂಜುನಾಥ್ (35) ಅಂತರಗಂಗೆ ಕ್ಯಾಂಪ್ (ಭದ್ರಾವತಿ) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ!ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ!

ಸ್ಫೋಟದಲ್ಲಿ ಮೃತಪಟ್ಟ ಇನ್ನೊಬ್ಬ ಕಾರ್ಮಿಕರ ಮೃತದೇಹದ ಗುರುತು ಪತ್ತೆಯಾಗುವುದು ಬಾಕಿ ಇದೆ. ಈ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಗುರುವಾರ ರಾತ್ರಿ ಸ್ಫೋಟ ಸಂಭವಿಸಿದ ಹುಣಸೋಡು ಕಲ್ಲು ಕ್ವಾರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶಿವಮೊಗ್ಗ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

English summary
Shivamogga superintendent of police K. M. Shantharaju said that 5 dead body identified who killed in gelatin sticks blast took place at a railway crusher site in on January 21, night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X