ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಾವತಿಯಲ್ಲಿ ಶಾಲಾ ಪ್ರವಾಸ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿನಿ ಸಾವು

|
Google Oneindia Kannada News

ಶಿವಮೊಗ್ಗ, ನವೆಂಬರ್ 10: ಭದ್ರಾವತಿಯಿಂದ ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್ ಅಫಘಾತಕ್ಕೀಡಾಗಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಎನ್‌ಆರ್ ಪುರದಲ್ಲಿ ನಡೆದಿದೆ.

ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಪ್ರವಾಸವನ್ನು ಹಮ್ಮಿಕೊಂಡಿದ್ದರು, ಶಾಲೆಯ ಎ ಮತ್ತು ಬಿ ತರಗತಿಯ 9 ವಿದ್ಯಾರ್ಥಿಗಳು ಶೃಂಗೇರಿ, ಉಡುಪಿ, ಮಲ್ಪೆ ಪ್ರವಾಸ ಕೈಗೊಂಡಿದ್ದರು. ಶನಿವಾರ ಬೆಳಗ್ಗೆ 8 ಗಂಟೆಗೆ ಭದ್ರಾವತಿ ಬಿಟ್ಟ ಎರಡು ಟೂರಿಸ್ಟ್ ಬಸ್‌ಗಳಲ್ಲಿ ಒಂದು ಬಸ್‌ ಬಾಳೆಕೊಪ್ಪದ ಬಳಿಯ ಕ್ರಾಸ್‌ವೊಂದರಲ್ಲಿ ರಾಕೇಶ್ ಟೂರಿಸ್ಟ್ ಬಸ್ ಪಲ್ಟಿ ಹೊಡೆದಿದೆ.

ನಿದ್ದೆಗೆ ಜಾರಿದ ಚಾಲಕ: ಮುಧೋಳದಲ್ಲಿ ಮೂವರು ಸ್ಥಳದಲ್ಲೇ ಸಾವು ನಿದ್ದೆಗೆ ಜಾರಿದ ಚಾಲಕ: ಮುಧೋಳದಲ್ಲಿ ಮೂವರು ಸ್ಥಳದಲ್ಲೇ ಸಾವು

ವಿದ್ಯಾರ್ಥಿನಿ ದಿಯಾ ಶೇಖಾವತ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ, 44 ಜನರಿಗೆ ಗಾಯಗಳಾಗಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ, 21 ಮಂದಿಯನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Girl dies as bus over turned near NR Pura

ಕಾರ್ ಸೀಟ್‌ಬೆಲ್ಟ್‌ ಹಾಕದೇ ದಿನಕ್ಕೆ ಪ್ರಾಣ ಕಳ್ಕೊಳ್ಳೋರು ಎಷ್ಟು ಜನ ಗೊತ್ತಾ? ಕಾರ್ ಸೀಟ್‌ಬೆಲ್ಟ್‌ ಹಾಕದೇ ದಿನಕ್ಕೆ ಪ್ರಾಣ ಕಳ್ಕೊಳ್ಳೋರು ಎಷ್ಟು ಜನ ಗೊತ್ತಾ?

ಇದರಲ್ಲಿ ನಂದಿನಿ, ಸುಹಾನ್ ಮತ್ತೋರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ. ಮ್ಯಾಕ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆಎ ದಯಾನಂದ್ ಮತ್ತು ಸಾರ್ವಜನಿಕ ಶಿಕ್ಷಣಾಧಿಕಾರಿ ಸುಮಂಗಳ ಭೇಟಿ ನೀಡಿ ಗಾಯಗೊಂಡ ಶಾಲಾ ಮಕ್ಕಳ ಕ್ಷೇಮ ವಿಚಾರಿಸಿದ್ದಾರೆ. ಮೋವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಹತ್ತಿರದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ.

English summary
A girl was died after private bus over turned near N.R.Pura on Saturday morning. The bus from Bhadravati which was taking students to educational tour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X