ಶಿಕಾರಿಪುರ ಕ್ಷೇತ್ರದತ್ತ ಗೂಳಿಹಟ್ಟಿ ಶೇಖರ್!
ಶಿವಮೊಗ್ಗ, ಜು. 22 : ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಗೂಳಿಹಟ್ಟಿ ಶೇಖರ್ ಶಿಕಾರಿಪುರದ ಮೇಲೆ ಕಣ್ಣಿಟ್ಟಿದ್ದಾರೆ. ಶಿಕಾರಿಪುರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದು, ಜೆಡಿಎಸ್ ಟಿಕೆಟ್ ನೀಡದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೂಳಿಹಟ್ಟಿ ಶೇಖರ್ ಸೋಲು ಅನುಭವಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದರು. ಸದ್ಯ ಶಿಕಾರಿಪುರದಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿಸುವ ಉತ್ಸಾಹದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ಆರಂಭಿಸಿದ್ದಾರೆ.

"ತಮ್ಮ ಒಂದು ಕಣ್ಣು ಹೋದರೂ ಪರವಾಗಿಲ್ಲ, ಇನ್ನೊಬ್ಬರ ಎರಡು ಕಣ್ಣು ಹೋಗಲಿ ಎಂದು ಶಿಕಾರಿಪುರದಲ್ಲಿ ಕಣಕ್ಕಿಳಿಯಲು ನಿರ್ಧಿಸಿದ್ದೇನೆ. ನಾನು ಗೆಲ್ಲದಿದ್ದರೂ ಪರವಾಗಿಲ್ಲ ಒಬ್ಬರು ಅಭ್ಯರ್ಥಿಯನ್ನು ಮಾತ್ರ ಸೋಲಿಸುತ್ತೇನೆ" ಎನ್ನುವ ನಂಬಿಕೆಯಿಂದ ಕಣಕ್ಕಿಳಿಯುತ್ತಿದ್ದೇನೆ ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. [ಚುನಾವಣಾ ಕಣಕ್ಕೆ ಬಿ.ಸಿ.ಪಾಟೀಲ್?]
2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 15,000 ಮತಗಳನ್ನು ಪಡೆದಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಬಳಿಗಾರ್ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸುವ ಉತ್ಸಾಹದಲ್ಲಿದ್ದಾರೆ. ಸದ್ಯ ಗೂಳಿಹಟ್ಟಿ ಪ್ರವೇಶವಾಗಿರುವುದು ಹೊಸ ಗೊಂದಲ ಹುಟ್ಟು ಹಾಕಿದೆ. ಜೆಡಿಎಸ್ ಟಿಕೆಟ್ ನೀಡದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅವರು ನಿರ್ಧಿರಿಸಿದ್ದಾರೆ. [ಉಪ ಚುನಾವಣೆ ವೇಳಾಪಟ್ಟಿ]
ರಾಘವೇಂದ್ರ ಆಯ್ಕೆ ಖಚಿತ : ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಬಿ.ವೈ.ರಾಘವೇಂದ್ರ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಶಿಕಾರಿಪುರದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಹಾಜರಿದ್ದ ರಾಘವೇಂದ್ರ ಅವರಿಗೂ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕಾರ್ಯಕರ್ತರು ಮನವಿ ಮಾಡಿದ್ದಾರೆ. [ಗೂಳಿಹಟ್ಟಿ ಸಿನಿಮಾದ ಚಿತ್ರಗಳು]
ಕಾಂಗ್ರೆಸ್ ಪಕ್ಷದಿಂದ ಉಪ ಚುನಾವಣೆಗೆ ಶಿಕಾರಿಪುರ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ದೊರಕಿಲ್ಲ. ಕಳೆದ ಬಾರಿ ಸ್ಪರ್ಧಿಸಿದ್ದ ಎಚ್.ಎಸ್.ಶಾಂತವೀರಪ್ಪ ಗೌಡ ಮತ್ತು ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ.ಪಾಟೀಲ್ ಹೆಸರು ಕೇಳಿಬರುತ್ತಿದೆ. ಆ.21ರಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications