'ಬೆಂಗಳೂರಿಗೆ ಶರಾವತಿ ನದಿಯಿಂದ ನೀರು ತರುವ ಯೋಜನೆ ಇಲ್ಲ'
ಶಿವಮೊಗ್ಗ, ಮಾರ್ಚ್ 3: ಅರಬ್ಬಿ ಸಮುದ್ರ ಸೇರುತ್ತಿರುವ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಜೋಗದಲ್ಲಿ ಶುಕ್ರವಾರ ಶರವಾತಿ ಯೋಜನೆಯ 1,035 ಮೆಗಾವ್ಯಾಟ್ ನವೀಕೃತ ಶರತಾವತಿ ವಿದ್ಯುದಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಹಿರಿಯರು ಮಾಡಿರುವ ಈ ಘಟಕವನ್ನು ಹಾಗೂ ಇಲ್ಲಿನ ಪ್ರಕೃತಿ ಸಂಪನ್ಮೂಲವನ್ನು ಇಲ್ಲಿಯೇ ಸದ್ಬಳಕೆ ಮಾಡುವ ಚಿಂತನೆ ನಮ್ಮದು. ಮುಂದಿನ ವರ್ಷದಿಂದ ನಿಗಮದ ಫೌಂಡೇಶನ್ ದಿನವನ್ನು ರಾಜ್ಯದ ಬೇರೆ ಬೇರೆ ಕಡೆಯ ವಿದ್ಯುದಾಗಾರದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.
ಎಂತಹ ಪರಿಸ್ಥಿತಿಯಲ್ಲೂ ಈ ಬಾರಿ ರಾಜ್ಯಕ್ಕೆ ವಿದ್ಯುತ್ ಬರ ಬರುವುದಿಲ್ಲ. ವಿದ್ಯುತ್ ಸಮಸ್ಯೆ ಎದುರಿಸಲು ಎಲ್ಲಾ ರೀತಿಯಲ್ಲೂ ರಾಜ್ಯ ಸರ್ಕಾರ ಸಜ್ಜಾಗಿದೆ. ಕಳೆದ ಬಾರಿ ನಾವು ನಿರೀಕ್ಷೆ ಮಾಡಿದಷ್ಟು ಮಳೆ ಬಂದಿಲ್ಲ.

ಲಿಂಗನಮಕ್ಕಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಆದರೂ ಶೇ.60 ರಷ್ಟು ನೀರನ್ನು ಸಂಗ್ರಹಿಸಿಟಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಬೇಕಾದ ವಿದ್ಯುತ್ ಉತ್ಪಾದನೆ ಮಾಡಿ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತದೆ. ಇದರ ಜತೆಗೆ 4.08ರೂ. ದರದಲ್ಲಿ ವಿದ್ಯುತ್ ಖರೀದಿಗೆ ಚಿಂತನೆ ನಡೆಸಲಾಗಿದೆ. ಡಿಸೆಂಬರ್ ನೊಳಗೆ ವಿದ್ಯುತ್ ಸ್ವಾವಲಂಬಿ ರಾಜ್ಯವಾಗಿ ಹೊರಹೊಮ್ಮೆಲಿ ಎಂದು ಹೇಳಿದ್ದಾರೆ.
ಎರಡು ಹೊಸ ಯೋಜನೆ: ಲಿಂಗನಮಕ್ಕಿ ಅಣೆಕಟ್ಟಿನ ತಳಕಳಲೆ ಡ್ಯಾಂ ಬಳಿ ಮತ್ತು ಶಿವನಸಮುದ್ರದಲ್ಲಿ 2 ಸಾವಿರ ಮೆ.ವ್ಯಾ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
-
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications