ಸಾಗರದಲ್ಲಿ ಬೇಳೂರು ಬೆಂಬಲ ಗಿಟ್ಟಿಸುವ ಯತ್ನದಲ್ಲಿ ಹಾಲಪ್ಪ
ಸಾಗರ, ಏಪ್ರಿಲ್ 17: ಸಾಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಅವರ ವಿಶ್ವಾಸ ಪಡೆದುಕೊಂಡು ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಿಂದ ಉದ್ಭವಗೊಂಡಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಟಿಕೆಟ್ ಸಿಗದಿದ್ದಾಗ ಅಸಮಾಧಾನ ಆಗುವುದು ಸಹಜ. ಅದೇ ರೀತಿ ಬೇಳೂರು ಅವರಿಗೂ ಆಗಿದೆ. ಪಕ್ಷದ ಮುಖಂಡರ, ಹಿತೈಶಿಗಳ ಸಮ್ಮುಖದಲ್ಲಿ ಕುಳಿತು ಅಸಮಾಧಾನ ಶಮನಗೊಳಿಸಲಾಗುವುದು," ಎಂದರು.

ಸಾಗರದಲ್ಲಿ ಐದು ಜನರು ಆಕಾಂಕ್ಷಿಗಳಿದ್ದರು. ಇದರಲ್ಲಿ ಮೂವರ ವಿಶ್ವಾಸ ಪಡೆಯಲಾಗಿದೆ. ಇದೇ ರೀತಿ ಬೇಳೂರು ಅವರ ಅಸಮಾಧಾನವನ್ನು ಶಮನಗೊಳಿಸಲಾಗುವುದು ಎಂದರು.
ಸೋಮವಾರ ರಾತ್ರಿ ವಿನಾಯಕ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆ ಮಾಡಿದವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ವಿನಾಯಕ ನನ್ನ ಆಪ್ತ ಸ್ನೇಹಿತ ಅಷ್ಟೆ. ಆದರೆ ಆತ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿರಲಿಲ್ಲ ಎಂದರು

ಏಪ್ರಿಲ್ 20ರಂದು ಸಾಗರದ ಗಣಪತಿ ದೇವಸ್ಥಾನದಿಂದ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಲಾಗುವುದು. ಇದಕ್ಕೆ ಚುನಾವಣಾ ಆಯೋಗದ ಅನುಮತಿ ಬೇಕಾಗಿದ್ದು, ಆಯೋಗ ಅನುಮತಿ ನೀಡಿದರೆ ಮಾತ್ರ ಮೆರವಣಿಗೆ ಎಂದರೆ.
ಅವರು ಇಂದು ಬಿಜೆಪಿ ಹಿರಿಯ ಮುಖಂಡರಾದ ಆಯನೂರ್ ಮಂಜುನಾಥ್ ಸೇರಿ ಹಲವು ಹಿರಿ ಕಿರಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications