ಸಾಗರದಲ್ಲಿ ಬೇಳೂರು ಬೆಂಬಲ ಗಿಟ್ಟಿಸುವ ಯತ್ನದಲ್ಲಿ ಹಾಲಪ್ಪ
ಸಾಗರ, ಏಪ್ರಿಲ್ 17: ಸಾಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಅವರ ವಿಶ್ವಾಸ ಪಡೆದುಕೊಂಡು ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಿಂದ ಉದ್ಭವಗೊಂಡಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದು ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಟಿಕೆಟ್ ಸಿಗದಿದ್ದಾಗ ಅಸಮಾಧಾನ ಆಗುವುದು ಸಹಜ. ಅದೇ ರೀತಿ ಬೇಳೂರು ಅವರಿಗೂ ಆಗಿದೆ. ಪಕ್ಷದ ಮುಖಂಡರ, ಹಿತೈಶಿಗಳ ಸಮ್ಮುಖದಲ್ಲಿ ಕುಳಿತು ಅಸಮಾಧಾನ ಶಮನಗೊಳಿಸಲಾಗುವುದು," ಎಂದರು.

ಸಾಗರದಲ್ಲಿ ಐದು ಜನರು ಆಕಾಂಕ್ಷಿಗಳಿದ್ದರು. ಇದರಲ್ಲಿ ಮೂವರ ವಿಶ್ವಾಸ ಪಡೆಯಲಾಗಿದೆ. ಇದೇ ರೀತಿ ಬೇಳೂರು ಅವರ ಅಸಮಾಧಾನವನ್ನು ಶಮನಗೊಳಿಸಲಾಗುವುದು ಎಂದರು.
ಸೋಮವಾರ ರಾತ್ರಿ ವಿನಾಯಕ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆ ಮಾಡಿದವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ವಿನಾಯಕ ನನ್ನ ಆಪ್ತ ಸ್ನೇಹಿತ ಅಷ್ಟೆ. ಆದರೆ ಆತ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿರಲಿಲ್ಲ ಎಂದರು

ಏಪ್ರಿಲ್ 20ರಂದು ಸಾಗರದ ಗಣಪತಿ ದೇವಸ್ಥಾನದಿಂದ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಲಾಗುವುದು. ಇದಕ್ಕೆ ಚುನಾವಣಾ ಆಯೋಗದ ಅನುಮತಿ ಬೇಕಾಗಿದ್ದು, ಆಯೋಗ ಅನುಮತಿ ನೀಡಿದರೆ ಮಾತ್ರ ಮೆರವಣಿಗೆ ಎಂದರೆ.
ಅವರು ಇಂದು ಬಿಜೆಪಿ ಹಿರಿಯ ಮುಖಂಡರಾದ ಆಯನೂರ್ ಮಂಜುನಾಥ್ ಸೇರಿ ಹಲವು ಹಿರಿ ಕಿರಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications