ಹಣಗೆರೆ ಚಿತ್ರಣ ಬದಲು; ಸ್ಥಳ ಪರಿಶೀಲಿಸಿದ ಸಚಿವರು
ಶಿವಮೊಗ್ಗ, ಜೂನ್ 27; "ಹಣಗೆರೆ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೋವಿಡ್ ಸಂಪೂರ್ಣ ಕಡಿಮೆಯಾದ ಬಳಿಕ 15 ದಿನದೊಳಗೆ ಕ್ಷೇತ್ರದ ಶಾಸಕ ಆರಗ ಜಾನೇಂದ್ರ, ಪ್ರಮುಖ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ" ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹಣಗೆರೆಗೆ ಶನಿವಾರ ಭೇಟಿ ನೀಡಿದ ಸಚಿವರು ದೇವಾಲಯದ ವಾತಾವರಣವನ್ನು ವೀಕ್ಷಿಸಿದರು. ಬಳಿಕ ಸಭೆ ನಡೆಸಿದ ಅವರು, "ಇಡೀ ರಾಜ್ಯದಲ್ಲೇ ಹಣಗೆರೆ ವಿಶಿಷ್ಟವಾದ ಸ್ಥಳವಾಗಿದೆ. ಒಂದೇ ಜಾಗದಲ್ಲಿ ದರ್ಗಾ ಹಾಗೂ ದೇವಸ್ಥಾನ ಇರುವುದು ಮಾದರಿಯಾಗಿದೆ. ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕಿದೆ" ಎಂದರು.
"ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಣಗೆರೆಯ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆಯಿಂದ ಏನು ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈಗಾಗಲೇ ಅವರೊಂದಿಗೆ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ನೆರವು ನೀಡಲಾಗುವುದು" ಎಂದು ಹೇಳಿದರು.

"ಶುದ್ಧ ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಬೇಕಿದೆ. ದೂರದಿಂದ ಆಗಮಿಸುವ ಪ್ರವಾಸಿಗರು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಊಟೋಪಚಾರ ಒದಗಿಸಬೇಕು. ಇಲ್ಲೊಂದು ಕಲ್ಯಾಣ ಮಂದಿರ ನಿರ್ಮಿಸುವ ಬಗ್ಗೆಯೂ ಚಿಂತನೆ ನಡೆಸಬಹುದು" ಎಂದು ತಿಳಿಸಿದರು.
ಪಾರದರ್ಶಕತೆ; "ನಾನು ಮುಜರಾಯಿ ಸಚಿವನಾದ ಬಳಿಕ ಪ್ರತಿ ದೇವಸ್ಥಾನದ ಆಡಳಿತದಲ್ಲೂ ಪಾರದರ್ಶಕತೆ ತರಲು ಮುಂದಾಗಿದ್ದೇನೆ. ದೇವಾಲಯಗಳಲ್ಲಿ ಭಕ್ತರು ನೀಡುವ ಪತಿ ಪೈಸೆಗೂ ಲೆಕ್ಕ ಇಡಬೇಕು. ಕಾಣಿಕೆ ಹಣ ಸದ್ಬಳಕೆಯಾಗಬೇಕು" ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

"ಸರ್ಕಾರದ ಅನುದಾನದೊಂದಿಗೆ ದೇವಾಲಯದಲ್ಲಿ ಸಂಗ್ರಹವಾಗುವ ಕಾಣಿಕೆ ಹಣವನ್ನು ಬಳಸಿಕೊಂಡು ಹಣಗೆರೆಕಟ್ಟೆಯನ್ನು ಮಾದರಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾಡುವ ಎಲ್ಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡಲಾಗುವುದು" ಎಂದರು.
ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಮೂರ್ತಿ, ತಾಲೂಕು ಪಂಚಾಯಿತು ಮಾಜಿ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ತಹಸೀಲ್ದಾರ್ ಶ್ರೀಪಾದ ರಾವ್ ಸೇರಿದಂತೆ ಹಲವರು ಇದ್ದರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications