Get Updates
Get notified of breaking news, exclusive insights, and must-see stories!

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡ ಹಸಿರುಮಕ್ಕಿ ಲಾಂಚ್, ಪ್ರಯಾಣಿಕರ ಆತಂಕ

ಶಿವಮೊಗ್ಗ, ಆಗಸ್ಟ್ 06: ಮಲೆನಾಡು ಭಾಗದಲ್ಲಿ ಬೀಸುತ್ತಿರುವ ಅತಿಯಾದ ಗಾಳಿಯಿಂದಾಗಿ ಶರಾವತಿ ನದಿ ನೀರಿನ ನಡುವೆ ಹಸಿರುಮಕ್ಕಿ ಲಾಂಚ್ ಸಿಲುಕಿಕೊಂಡಿದ್ದು, ಪ್ರಯಾಣಿಕರು ಆತಂಕದಲ್ಲಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಹಸಿರುಮಕ್ಕಿ ದಡದಿಂದ ನಿಟ್ಟೂರು ಕಡೆ ಹೊರಟ ಲಾಂಚ್, ಅತಿಯಾದ ಗಾಳಿಯಿಂದಾಗಿ ನದಿಯ ನಡುವಿನಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿಯ ಪಿಲ್ಲರ್ ಗೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಭೀಕರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರರಾಗಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ಅನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.

 Shivamoga: Hasirumakki Launch Got Stuck In Sharawati Backwater, Anxiety Among Travelers

ಅದರಂತೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ ಹಲವು ಗಂಟೆಗಳಲ್ಲಿ ಮಳೆ ವ್ಯಾಪಕವಾಗಿ ಬೀಳುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ 7 ಜಿಲ್ಲೆಯ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಎಂದು ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+