ಭಾರೀ ಮಳೆಗೆ ಸಾಗರ ಪಟ್ಟಣದ ವಿವಿಧೆಡೆ ಜಲಾವೃತ; ಶಾಸಕರಿಂದ ಸಿಟಿ ರೌಂಡ್ಸ್
ಶಿವಮೊಗ್ಗ, ಜುಲೈ 23: ಕಳೆದ ಎರಡು ದಿನದಿಂದ ಸಾಗರ ತಾಲ್ಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೂ ನೀರು ನುಗ್ಗಿದ್ದು, ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ.
ಕೆಳದಿ ರಸ್ತೆ ಮೇಲೆ ನೀರು
ಚರಂಡಿಗಳು ಭರ್ತಿಯಾಗಿ ಸಾಗರ ಪಟ್ಟಣದ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜನರಿಗೆ ನೆರವಾಗುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಬಡಾವಣೆಗೆ ನುಗ್ಗಿದ ನೀರು
ಇಲ್ಲಿನ ವಿನೋಬನಗರದ ಲೇಔಟ್ ಒಂದಕ್ಕೆ ನೀರು ನುಗ್ಗಿದೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ವರದಿಯಾಗಿದೆ.

ಶಾಸಕರಿಂದ ಸಿಟಿ ರೌಂಡ್ಸ್
ಭಾರಿ ಮಳೆ ಹಿನ್ನೆಲೆ ಸಾಗರ ಶಾಸಕ ಹರತಾಳು ಹಾಲಪ್ಪ ಬೆಳಗ್ಗೆಯಿಂದ ಪಟ್ಟಣದ ವಿವಿಧೆಡೆ ರೌಂಡ್ಸ್ ಹಾಕಿದ್ದಾರೆ. ಜಲಾವೃತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು, ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.

ಪುನರ್ವಸತಿ ಕೇಂದ್ರ ಆರಂಭ
ಭಾರಿ ಮಳೆ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ ಎಂದು ಶಾಸಕರ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ. 9480010111 ನಂಬರ್ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications