ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭ; ಹಳಿ ಪರಿಶೀಲನೆ
ಶಿವಮೊಗ್ಗ, ಜುಲೈ 25; ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭವಾಗಿದೆ. ಶನಿವಾರದಿಂದಲೇ ತಾಳಗುಪ್ಪದಿಂದ ರೈಲುಗಳು ಬೆಂಗಳೂರು, ಮೈಸೂರಿಗೆ ಪ್ರಯಾಣ ಬೆಳೆಸಿವೆ.
ಭಾರೀ ಮಳೆಗೆ ವರದಾ ನದಿ ಉಕ್ಕಿ ಹರಿದಿತ್ತು. ಸಾಗರ ಜಂಬಗಾರು ಮತ್ತು ತಾಳಗುಪ್ಪ ನಡುವೆ ಹಲವು ಕಡೆ ರೈಲು ಹಳಿ ಜಲಾವೃತವಾಗಿತ್ತು. ಹಾಗಾಗಿ ಶುಕ್ರವಾರ ರಾತ್ರಿ ತೆರಳಬೇಕಿದ್ದ ತಾಳಗುಪ್ಪ-ಮೈಸೂರು ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಂಟರ್ ಸಿಟಿ ರೈಲನ್ನು ಸಹ ಶಿವಮೊಗ್ಗಕ್ಕೆ ಸೀಮಿತಗೊಳಿಸಲಾಗಿತ್ತು.
ಶನಿವಾರದಿಂದ ರೈಲು ಸಂಚಾರ ಪುನಾರಂಭವಾಗಿದೆ. ತಾಳಗುಪ್ಪದಿಂದ ಮೈಸೂರಿಗೆ ರೈಲುಗಳು ಸಂಚರಿಸಿದವು. ಪ್ರಯಾಣಿಕರ ಸಂಖ್ಯೆಯು ದೊಡ್ಡದಾಗಿತ್ತು. ಇವತ್ತಿನಿಂದ ರೈಲು ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹಳಿ ಪರಿಶೀಲಿಸಿದ ಅಧಿಕಾರಿಗಳು; ಹಳಿ ಜಲಾವೃತವಾಗಿದ್ದರಿಂದ ರೈಲು ಸಂಚಾರ ಪುನಾರಂಭಕ್ಕೂ ಮೊದಲು ಹಳಿ ಪರಿಶೀಲನೆ ನಡೆಸಬೇಕಾಗುತ್ತದೆ. ರೈಲ್ವೆ ಅಧಿಕಾರಿಗಳು ಶುಕ್ರವಾರ ಮತ್ತು ಶನಿವಾರ ಹಳಿ ಪರಿಶೀಲಿಸಿದರು.
ಹಳಿ ಡ್ಯಾಮೇಜ್ ಆಗಿದೆಯೇ?, ರೈಲು ಸಂಚರಿಸಿದರೆ ನೆಲ ಕುಸಿಯಬುಹುದೆ? ಎಂದು ಅಧಿಕಾರಿಗಳು ಪರಿಶೀಲನೆ ಮಾಡಿದ ಬಳಿಕ ರೈಲು ಸಂಚಾರಕ್ಕೆ ಅವಕಾಶ ನೀಡಲಾಯಿತು.
ಭಾರೀ ಮಳೆ ಹಿನ್ನೆಲೆ ಹಳಿ ಮೇಲೆ ನೀರು ನಿಂತಿರುವುದರಿಂದ ಸಾಗರ-ತಾಳಗುಪ್ಪ ನಡುವಿನ ರೈಲು ಸಂಚಾರಕ್ಕೆ ಅಡ್ಡಿಯಾಗಿತ್ತು. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲು ಹಳಿ ಮೇಲೆ ನೀರು ನಿಂತಿತ್ತು. ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಮಧ್ಯಾಹ್ನದ ರೈಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಿಂದ ಸಂಚಾರ ನಡೆಸಿತ್ತು.
ಶುಕ್ರವಾರ ಸಾಗರದಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿತ್ತು. ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಸುರಿದಿತ್ತು. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿತ್ತು, ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿತ್ತು.
ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿದಿತ್ತು. ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿದ್ದವು. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications