ಮಾರ್ಗ ಬದಲಾವಣೆ; ಕೊಲ್ಲೂರಿಗೆ ಭೇಟಿ ನೀಡುವವರ ಗಮನಕ್ಕೆ
ಶಿವಮೊಗ್ಗ, ಜೂನ್ 23 : ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಸೂಚನೆ ನೀಡಲಾಗಿದೆ.
Recommended Video
ಶಿವಮೊಗ್ಗ ಜಿಲ್ಲಾಡಳಿತ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದೆ. ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ರಾಷ್ಟ್ರೀಯ ಹೆದ್ದಾರಿ ನಂ 766ಸಿ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಈ ಮಾರ್ಗದಲ್ಲಿನ ಚಿಕ್ಕಪೇಟೆ ಬಳಿ ಸೇತುವೆಯ ಕೆಳಗೆ ಗೋಡೆ ಕುಸಿತಗೊಂಡಿದೆ. ಆದ್ದರಿಂದ, ಭಾರಿ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಪ್ರಕಟಣೆಯಲ್ಲಿ ಸೂಚನೆ ಕೊಡಲಾಗಿದೆ.

ಪರ್ಯಾಯ ಮಾರ್ಗ: ಭಾರಿ ವಾಹನಗಳು ಹೊಸನಗರ-ನಗರ-ನಿಲ್ಸಕಲ್-ಹುಲಿಕಲ್-ಹೊಸಂಗಡಿ ಮುಖಾಂತರ ಸಂಚಾರ ನಡೆಸಬಹುದು ಎಂದು ಜಿಲ್ಲಾಡಳಿತ ಹೇಳಿದೆ.
ಸೇತುವೆ ಕೆಳಗೆ ಗೋಡೆ ಕುಸಿದಿರುವ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಿರುವ ಬಗ್ಗೆ ಜನರಿಗೆ ಮಾಹಿತಿ ತಿಳಿಸಲು ಅವಶ್ಯವಿರುವ ಸೂಚನಾಫಲಕಗಳನ್ನು ಅಳವಡಿಸಬೇಕು ಹಾಗೂ ನಿಯಂತ್ರಣ ಸಿಬ್ಬಂದಿಗಳನ್ನು ನೇಮಿಸಲು ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.
ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಈ ಮಾರ್ಗದಲ್ಲಿ ಭಾರಿ ವಾಹನಗಳು ಸಂಚಾರ ನಡೆಸಿದರೆ ಸೇತುವೆ ಮತ್ತಷ್ಟು ಕುಸಿಯುವ ಸಂಭವವಿದೆ ಎಂದು ವರದಿ ನೀಡಿರುತ್ತಾರೆ. ಈ ವರದಿಯ ಅನ್ವಯ ವಾಹನ ಸಂಚಾರ ನಿಷೇಧಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications