ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ನಿಷೇಧ: ಬದಲಿ ಮಾರ್ಗ ಬಳಸಲು ಕ್ರಮ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 9: ಜಿಲ್ಲೆಯ ತೀರ್ಥಹಳ್ಳಿ-ಉಡುಪಿ ರಸ್ತೆ ಆಗುಂಬೆ ಘಾಟಿಯ ಮಾರ್ಗವು ಕಿರಿದಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದೆ.

Recommended Video

Sanjjanaa ಕಳೆದ ಮಾನಕ್ಕೆ 10 ಕೋಟಿ ಹಣ ಕೇಳಿದ ಸಂಬರಗಿ | Oneindia Kannada

ರಾಷ್ಟ್ರೀಯ ಹೆದ್ದಾರಿ-166ಎ ರಲ್ಲಿ ರಸ್ತೆಯ ಬದಿ ಮಣ್ಣು ಕುಸಿತವಾಗುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯವಾಗಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Shivamogga: Heavy Vehicles Banned In Agumbe Ghat

 ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಸತತ ಹಾಗೂ ಭಾರಿ ಮಳೆಯಾಗುವ ಸಂದರ್ಭದಲ್ಲಿ ವಾಹನಗಳ ಮಾರ್ಗ ಬದಲಾವಣೆಯ ವಿವರ: 12 ಟನ್ ಅಧಿಕ ಭಾರದ ವಾಹನಗಳು ಶಿವಮೊಗ್ಗ-ತೀರ್ಥಹಳ್ಳಿ - ಆಗುಂಬೆ- ಶೃಂಗೇರಿ- ಕೆರೆಕಟ್ಟೆ- ಕಾರ್ಕಳ- ಉಡುಪಿ- ಮಂಗಳೂರು ಅಥವಾ ಶಿವಮೊಗ್ಗ-ತೀರ್ಥಹಳ್ಳಿ - ಮಾಸ್ತಿಕಟ್ಟೆ - ಹುಲಿಕಲ್ - ಹೊಸಂಗಡಿ - ಸಿದ್ಧಾಪುರ - ಉಡುಪಿ ಮಾರ್ಗಗಳ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

English summary
Shivamogga DC Shivakumar has issued an order to ban heavy vehicles in agumbe ghat and directed to use alternative roads
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X