ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 16: ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ‌ವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಅತಿಯಾಗಿ ಮಳೆಯಾಗುತ್ತಿದ್ದು, ಅದರಲ್ಲೂ ಆಗುಂಬೆಯಲ್ಲಿ ಸುರಿಯುವ ಮಳೆಯಿಂದ ಘಾಟಿ ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಜೋಗದಲ್ಲಿ ಪ್ರವಾಸಿಗರ ಊಟ, ತಿಂಡಿ ವ್ಯವಸ್ಥೆಗೆ ನಿರ್ಬಂಧ ಜೋಗದಲ್ಲಿ ಪ್ರವಾಸಿಗರ ಊಟ, ತಿಂಡಿ ವ್ಯವಸ್ಥೆಗೆ ನಿರ್ಬಂಧ

12 ಟನ್ ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಜೂನ್ 15 ರಿಂದ ಅಕ್ಟೋಬರ್ 15 ರ ವರೆಗೆ ಭಾರೀ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

Heavy Vehicle Traffic Prohibition In Agumbe Ghat

ಭಾರಿ ವಾಹನಗಳ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗವನ್ನು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ, ಮಂಗಳೂರ ಮಾರ್ಗ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ, ಮಂಗಳೂರು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಸೂಚನೆ ನೀಡಲಾಗಿದೆ.

English summary
Shivamogga DC KB Sivakumar has issued an order banning heavy Vehicle traffic in Agumbe Ghat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X