ಕೊರೊನಾ ಸಂಕಷ್ಟಕ್ಕೆ ದೇಸಿ ಚಿಂತನೆಯ "ಚರಕ" ಸಂಸ್ಥೆ ಸ್ಥಗಿತ
ಶಿವಮೊಗ್ಗ, ಸೆಪ್ಟೆಂಬರ್ 2: ಕೊರೊನಾದಿಂದಾಗಿ ಹಲವು ಉದ್ಯಮಗಳು ಆರ್ಥಿಕ ಹಿಂಜರಿತ ಅನುಭವಿಸುತ್ತಿವೆ. ಇದೀಗ ರಾಷ್ಟ್ರವ್ಯಾಪಿ ಕೈಮಗ್ಗದ ಉತ್ಪನ್ನ ತಯಾರಿಕೆಗೆ ಪ್ರಸಿದ್ಧಿಯಾಗಿರುವ ಸಾಗರದ ಹೆಗ್ಗೋಡಿನ ಚರಕ ನೇಕಾರಿಕಾ ಸಂಸ್ಥೆಯೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸ್ಥಗಿತಗೊಂಡಿದೆ.
Recommended Video
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ಸರ್ಕಾರದ ನೆರವೂ ಸಿಗದೇ ಸಂಸ್ಥೆಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ಅಧೀಕೃತವಾಗಿ ಘೋಷಿಸಲಾಗಿದೆ. ಕೊರೊನಾ ಸಂಕಷ್ಟದಲ್ಲೂ ಚರಕ ಸಂಸ್ಥೆ ತನ್ನ ಚಟುವಟಿಕೆಯನ್ನು ಮುಂದುವರೆಸಿತ್ತು. 800ಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರಿಗೆ ಪೂರ್ಣ ವೇತನ ನೀಡಿತ್ತು. ಆದರೆ ಈ ಸಮಯದಲ್ಲಿ ಮೂರು ಕೋಟಿ ರೂ.ಗೂ ಹೆಚ್ಚಿನ ಕೈಮಗ್ಗ ಉತ್ಪನ್ನಗಳು ಮಾರಾಟವಾಗದಿರುವುದರಿಂದ ಮತ್ತು ಸರ್ಕಾರರಿಂದ ಯಾವುದೇ ಸಹಕಾರ ಸಿಗದ ಕಾರಣದಿಂದ ಆ. 28ರಂದು 'ನಾವು ದಿವಾಳಿ' ಎಂದು 'ಚರಕ'ದ ಕಾರ್ಯದರ್ಶಿ ಪ್ರತಿಭಾ ಎಂ.ವಿ. ಪ್ರಕಟಿಸಿದ್ದಾರೆ.
ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಂಸ್ಥೆಯು ನೇಕಾರಿಕೆ ಕಾರ್ಯ ನಿರ್ವಹಿಸುತ್ತಿತ್ತು. ಮೂರು ಜಿಲ್ಲೆಗಳಲ್ಲಿ ಸಂಸ್ಥೆಯ ಗಾರ್ಮೆಂಟ್ ವಿಭಾಗ, ವಸ್ತ್ರ ಮುದ್ರಣ ವಿಭಾಗ, ಕಸೂತಿ ವಿಭಾಗ ಚಟುವಟಿಕೆ ನಡೆಸುತ್ತಿತ್ತು. ನೈಸರ್ಗಿಕ ಬಣ್ಣಗಾರಿಕೆಯ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯೂ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಈ ಎಲ್ಲಾ ವಿಭಾಗಗಳೂ ಸ್ಥಗಿತಗೊಂಡಿವೆ ಎಂದು ದೇಸೀ ಚಿಂತಕ ಪ್ರಸನ್ನ ಅಧಿಕೃತವಾಗಿ ಘೋಷಿಸಿದ್ದಾರೆ.

ನೇಕಾರರ ಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಲು ಪ್ರಸನ್ನ ಅವರು ಈಚೆಗೆ ಎಂಟು ದಿನಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದರು. ಆಗ ಸರ್ಕಾರ 'ಪವಿತ್ರ ವಸ್ತ್ರ' ಹೆಸರಿನಲ್ಲಿ 60 ಲಕ್ಷ ರೂ.ಗಳ ಅನುದಾನ ಮಂಜೂರು ಮಾಡಿತ್ತು. ನೇಕಾರಿಕೆಯ ಅಭೀವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾಕಷ್ಟು ಯೋಜನೆ ಮತ್ತು ಅನುದಾನ ಮಂಜೂರು ಮಾಡಿದೆ. ಆದರೆ ಇದುವರೆಗೂ ಯಾವುದೇ ಅನುದಾನದ ಹಣ ಸಂಸ್ಥೆಯನ್ನು ತಲುಪಿಲ್ಲ ಎಂದು ಪ್ರಸನ್ನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ದೇಸೀ ಚಿಂತನೆಯಲ್ಲಿ ನಿರ್ಮಾಣಗೊಂಡ ಚರಕ ಸಂಸ್ಥೆಯೂ ಸ್ಥಗಿತಗೊಂಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications