ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್‌ವೈ ಒತ್ತಡಕ್ಕೆ ಮಣಿದ ಅಮಿತ್ ಶಾ, ಮತ್ತೆ ಪ್ರಚಾರಕ್ಕೆ ರೆಡ್ಡಿ

By Manjunatha
|
Google Oneindia Kannada News

ಶಿವಮೊಗ್ಗ, ಮೇ 02: ಜನಾರ್ದನ ರೆಡ್ಡಿ ಅವರು ಬಿಜೆಪಿ ಪರ ಪ್ರಚಾರ ಮಾಡುವುದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರ ಅವಶ್ಯಕತೆ ಯಾವ ಯಾವ ಕ್ಷೇತ್ರಗಳಲ್ಲಿ ಇದೆಯೋ ಅಲ್ಲೆಲ್ಲಾ ಜನಾರ್ದನ ರೆಡ್ಡಿ ಬಹಿರಂಗ ಪರಚಾರವನ್ನೇ ಮಾಡುತ್ತಾರೆ ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಿದ ರೆಡ್ಡಿ ಸಿದ್ದರಾಮಯ್ಯ ವಿರುದ್ಧ ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಿದ ರೆಡ್ಡಿ

ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಪರ ಬಹಿರಂಗ ಪ್ರಚಾರ ಮಾಡುತ್ತಿದ್ದ ಜನಾರ್ದನ ರೆಡ್ಡಿ ಅವರಿಗೆ ಬಹಿರಂಗ ಪ್ರಚಾರ ಮಾಡದಂತೆ ಹೈಕಮಾಂಡ್ ಸೂಚಿಸಿತ್ತು ಹಾಗಾಗಿ ಅವರು ಕೆಲವು ದಿನಗಳಿಂದ ಬಹಿರಂಗ ಪ್ರಚಾರದಿಂದ ಹಿಂದೆ ಸರಿದಿದ್ದರು. ಆದರೆ ಈಗ ಯಡಿಯೂರಪ್ಪ ಅವರು ಹೇಳುವ ಪ್ರಕಾರ ಜನಾರ್ದನ ರೆಡ್ಡಿಗೆ ಬಹಿರಂಗ ಪ್ರಚಾರ ಮಾಡಲು ಗ್ರೀನ್ ಸಿಕ್ಕಿದೆಯಂತೆ.

High command gives green signal to Janardhan Reddy BJP campaign

ಈ ಹಿಂದೆ ಅಮಿತ್ ಶಾ ಅವರು ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದರು, ಆದರೆ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರು ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿಕೊಳ್ಳಬೇಕೆಂದು ಒತ್ತಡ ಹೇರಿದ್ದರು.

ಬಿಜೆಪಿ ಪರ ಜನಾರ್ದನ ರೆಡ್ಡಿ ಪ್ರಚಾರ : ಯಡಿಯೂರಪ್ಪ ಹೇಳಿದ್ದೇನು?ಬಿಜೆಪಿ ಪರ ಜನಾರ್ದನ ರೆಡ್ಡಿ ಪ್ರಚಾರ : ಯಡಿಯೂರಪ್ಪ ಹೇಳಿದ್ದೇನು?

ಕೆಲವು ದಿನಗಳ ಹಿಂದೆಯಷ್ಟೆ ಜನಾರ್ದನ ರೆಡ್ಡಿಯನ್ನು ಪ್ರಚಾರಕ್ಕೆ ಬಾರದಂತೆ ಹೇಳಿ ಈಗ ಹಠಾತ್ತನೆ ನಿರ್ಧಾರ ಬದಲಿಸಿರುವ ಹಿಂದೆ ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರ ಒತ್ತಡ ಜೋರಾಗಿ ಇದೆ ಎನ್ನಲಾಗಿದೆ.

ಚುನಾವಣಾ ಪ್ರಚಾರಕ್ಕೆ ಜನಾರ್ದನ ರೆಡ್ಡಿಗೆ ಅವಕಾಶ ನೀಡಿರುವುದು ಮುಂದೆ ಜನಾರ್ದನ ರೆಡ್ಡಿ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಮುನ್ನುಡಿ ಎನ್ನಲಾಗುತ್ತಿದೆ.

English summary
BJP state president BS Yeddyurappa said 'BJP high command said yes to Janardhan Reddy BJP campaign, He will soon will be seen campaigning for BJP'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X