ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆ ಆರ್ಭಟ: ಹೊಸನಗರದಲ್ಲಿ ಗುಡ್ಡ ಕುಸಿತ, ತಪ್ಪಿದ ಭಾರಿ ಅನಾಹುತ!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 06: ಹೊಸನಗರ ತಾಲೂಕು ಯಡೂರು ಗ್ರಾಮ ಪಂಚಾಯಿತಿಯ ಕೌರಿ ಗ್ರಾಮದ ಬಿಚ್ಚಾಡಿಯಿಂದ ಮಾಗಲುಗೆ ಹೋಗುವ ಮಾರ್ಗ ಮಧ್ಯೆ ಭಾರೀ ಗಾಳಿ, ಮಳೆಗೆ ಗುಡ್ಡ ಕುಸಿತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಭೀಕರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ನೇರ ಹೊಣೆಯಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಮಳೆ ಆರ್ಭಟ; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?ಶಿವಮೊಗ್ಗದಲ್ಲಿ ಮಳೆ ಆರ್ಭಟ; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

Hill Collapse For Heavy Rain In Hosanagara

ಈ ನಡುವೆ ಕೊರೊನಾ ಸೋಂಕು ಮಹಾಮಾರಿ ರೋಗ ಬೆಂಬಿಡದೆ ಕಾಡುತಲಿದ್ದು, ಯಾವಾಗ ಇದರಿಂದ ಮುಕ್ತಿ ಸಿಗುವುದೋ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಆದಷ್ಟು ಬೇಗ ಗುಡ್ಡ ಕುಸಿಯುವಂತಹ ಪ್ರದೇಶಗಳಿಗೆ ಹೆಚ್ಚಿನ ಗಮನ ಹರಿಸಿ, ಸಂಭವಿಸುವ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ಮಲೆನಾಡು ಭಾಗದ ಜನರ ಆಗ್ರಹವಾಗಿದೆ.

English summary
Heavy rain has been raging for the past two days in the Malenadu region and people's lives have been disrupted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X