3 ರೂ 46 ಪೈಸೆ ಕಟ್ಟಲು 15 ಕಿ.ಮೀ ನಡೆದ ಶಿವಮೊಗ್ಗದ ರೈತ!
ಶಿವಮೊಗ್ಗ, ಜೂನ್ 30: ಬ್ಯಾಂಕ್ ನಿಂದ ಲಕ್ಷಾಂತರ, ಕೋಟ್ಯಂತರ ರೂಪಾಯಿ ಸಾಲ ಮಾಡಿ ಹಿಂತಿರುಗಿಸದೇ, ಹಿಂದಿರುಗಿಸುವ ಗೊಡವೆಗೂ ಹೋಗದೇ ಇರುವ ಎಷ್ಟೋ ಮಂದಿ ಇದ್ದಾರೆ. ಅಂಥವರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲೂ ಹಿಂದೆ ಮುಂದೆ ನೋಡುತ್ತಾರೆ. ಆದರೆ ಶಿವಮೊಗ್ಗದಲ್ಲಿ ಒಬ್ಬ ರೈತನನ್ನು ಬ್ಯಾಂಕೊಂದು ಅವಮಾನವೀಯವಾಗಿ ನಡೆಸಿಕೊಂಡಿದೆ.
Recommended Video
ಬ್ಯಾಂಕ್ ಗೆ ರೈತನೊಬ್ಬ ಕೇವಲ 3 ರೂಪಾಯಿ 46 ಪೈಸೆ ಕಟ್ಟಬೇಕಿದ್ದು, ಸುಮಾರು 15 ಕಿಲೋ ಮೀಟರ್ ದೂರ ಕಾಲ್ನಡಿಗೆಯಲ್ಲೇ ನಡೆದುಕೊಂಡು ಹೋಗಿ ಆ ರೈತ ಸಾಲ ಮರುಪಾವತಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮಡೆ ಗ್ರಾಮದಲ್ಲಿ ನಡೆದಿದೆ. ಇದರ ಇನ್ನಷ್ಟು ವಿವರ ಮುಂದಿದೆ...

35 ಸಾವಿರ ಬೆಳೆ ಸಾಲ ಪಡೆದಿದ್ದ ಅಮಡೆ ಗ್ರಾಮದ ರೈತ
ಅಮಡೆ ಗ್ರಾಮದ ರೈತ ಲಕ್ಷ್ಮೀನಾರಾಯಣ ಅವರು ನಿಟ್ಟೂರಿನ ಬ್ಯಾಂಕ್ ವೊಂದರಲ್ಲಿ 35 ಸಾವಿರ ರೂಪಾಯಿ ಬೆಳೆ ಸಾಲ ಪಡೆದಿದ್ದರು. ಇದರಲ್ಲಿ 32 ಸಾವಿರ ರೂಪಾಯಿ ಸಾಲ ಮನ್ನಾ ಯೋಜನೆಯಡಿ ಮನ್ನಾ ಆಗಿತ್ತು. ಉಳಿದ 3 ಸಾವಿರ ರೂಪಾಯಿಯನ್ನು ಬಡ್ಡಿ ಸಮೇತ ವಾಪಸ್ ಮಾಡಿದ್ದರು.

3 ರೂ 46 ಪೈಸೆ ಬಾಕಿ ಕಟ್ಟಲು ಕರೆಸಿದರು
ಆದರೆ ಕಳೆದ ಗುರುವಾರ ಬ್ಯಾಂಕ್ ನಿಂದ ಲಕ್ಷ್ಮೀ ನಾರಾಯಣ್ ಅವರಿಗೆ ಫೋನ್ ಮಾಡಿದ ಸಿಬ್ಬಂದಿ, ತಕ್ಷಣ ನೀವು ಬ್ಯಾಂಕ್ ಗೆ ಬಂದು ಹೋಗಿ ಎಂದು ತಿಳಿಸಿದ್ದಾರೆ. ವಿಷಯ ತಿಳಿಯಲು ಅವರು ಸುಮಾರು 15 ಕಿ.ಮೀ. ದೂರ ನಡೆದು ಹೋಗಿ ಬ್ಯಾಂಕ್ ನಲ್ಲಿ ವಿಚಾರಿಸಿದ್ದಾರೆ. ಆಗ, ನಿಮ್ಮ ಸಾಲದ ಹಣದಲ್ಲಿ 3 ರೂ 46 ಪೈಸೆ ಬಾಕಿ ಇದೆ ಅದನ್ನು ಕಟ್ಟಿ ಎಂದು ಹೇಳಿದ್ದಾರೆ.

"ಹೀಗೆ ಮಾಡಿದ್ದು ಎಷ್ಟು ಸರಿ?"
ಸಿಬ್ಬಂದಿ ಹೀಗೆ ಹೇಳುತ್ತಿದ್ದಂತೆ ಲಕ್ಷ್ಮಿ ನಾರಾಯಣ್ ಅವರಿಗೆ ಆಶ್ಚರ್ಯವಾಗಿದೆ. ಇದನ್ನು ಫೋನ್ ನಲ್ಲಿಯೇ ತಿಳಿಸಿದ್ದರೆ, ನಿಟ್ಟೂರಿನಲ್ಲಿನ ತನ್ನ ಸ್ನೇಹಿತರಿಂದ ಹಣ ಕಟ್ಟಿಸುತ್ತಿದ್ದೆ. ಹಿಂದೆ ಸಾಲದ ಬಡ್ಡಿ ಕಟ್ಟಲು ಬಂದಾಗ ಕೇಳಿದ್ದರೆ ಅಂದೇ ಕಟ್ಟುತ್ತಿದ್ದೆ. ಆದರೆ ಬ್ಯಾಂಕ್ ನವರು ಅರ್ಜೆಂಟ್ ಆಗಿ ಬಂದು ಹೋಗಿ ಎಂದು ಕರೆದು ಈಗ ಸಾಲ ಕಟ್ಟಿ ಎಂದಿದ್ದು ಎಷ್ಟು ಸರಿ ಎಂದಿದ್ದಾರೆ.

"ಚಿಲ್ಲರೆ ಸಾಲಕ್ಕೆ ಹೀಗೆ ಮಾಡಿದ್ದು ಸರಿಯೇ?"
ಲಾಕ್ ಡೌನ್ ನಿಂದ ಜನ ಆರ್ಥಿಕ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ಜನರಿಗೆ ಮೂರು ತಿಂಗಳು ಸಾಲ ಕಟ್ಟದಂತೆ ತಿಳಿಸಿದೆ. ಇಷ್ಟಾದರೂ ಬ್ಯಾಂಕ್ ನವರು ಹೀಗೆ ಮಾಡಿದ್ದು ಎಷ್ಟು ಸರಿ? ಅದೂ ಕೇವಲ ಚಿಲ್ಲರೆ ಸಾಲವನ್ನು ವಾಪಸ್ ಪಡೆಯಲು ಹೀಗೆ ಮಾಡಿದ್ದು ಸರಿಯೇ?
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications