ಹೊಸನಗರ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿ ಮಣ್ಣು ಕುಸಿತ
ಶಿವಮೊಗ್ಗ, ಜುಲೈ 11: ಶಿವಮೊಗ್ಗ ಜಿಲ್ಲೆಯ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾದ ಹೊಸನಗರದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಹೊಸನಗರ-ರಾಣೆಬೆನ್ನೂರು- ಕೊಲ್ಲೂರು ಮಾರ್ಗ ಮಧ್ಯೆ ರಸ್ತೆ ಬದಿ ಕುಸಿತ ಉಂಟಾಗಿದೆ.
Recommended Video
ಕಳೆದೊಂದು ವಾರದಲ್ಲಿ ದಾಖಲೆ ಪ್ರಮಾಣದಲ್ಲಿ ಇಲ್ಲಿ ಮಳೆಯಾಗಿದ್ದು, ಭಾರೀ ಮಳೆಗೆ ಹೊಸನಗರದ ನಾಗೋಡಿ ಸಮೀಪದ ರಾಷ್ಟ್ರೀಯ ಬೈಂದೂರು-ರಾಣಿಬೆನ್ನೂರು ರಸ್ತೆಯ ಕೊಲ್ಲೂರು ಮಾರ್ಗದಲ್ಲಿ ರಸ್ತೆ ಬದಿಯ ಮಣ್ಣು ಕುಸಿಯಲು ಆರಂಭವಾಗಿದೆ.
ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ
ರಸ್ತೆ ಕುಸಿತದ ಭೀತಿಯಿಂದ ಈ ಮಾರ್ಗದಲ್ಲಿ ವಾಹನ ಸವಾರರು ಆತಂಕದಿಂದಲೇ ಸಂಚಾರ ನಡೆಸುವಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಮಳೆಯಾದರೆ ರಸ್ತೆಗೆ ಹೆಚ್ಚಿನ ಮಟ್ಟದ ಹಾನಿಯಾಗಿ ಸಂಚಾರಕ್ಕೆ ತೊಂದರೆ ಆಗುವ ಸಾಧ್ಯತೆ ಇದೆ. ಕಳೆದ ವರ್ಷ ಸಹ ಈ ಭಾಗದಲ್ಲಿ ರಸ್ತೆಯ ಬದಿಯಲ್ಲಿ ಮಣ್ಣು ಕುಸಿದಿತ್ತು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರಿ ವಾಹನಗಳ ಸಂಚಾರವಿರುವುದರಿಂದ ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.