ನೀನಾಸಂ ರಂಗ ತರಬೇತಿ ಡಿಪ್ಲೋಮಾಗೆ ಅರ್ಜಿ ಹಾಕುವುದು ಹೇಗೆ?
ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2017-18ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು.
ಶಿವಮೊಗ್ಗ, ಮೇ 11: ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2017-18ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದ್ದು ಹದಿನೈದು ಮಂದಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ.
* ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ.
* ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ.
* ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ.

* ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.
* ಆನ್ ಲೈನ್ ನಿಂದ ಡೌನ್ ಲೋಡ್ ಮಾಡಿಕೊಂಡು, ಪ್ರವೇಶ ಪತ್ರವನ್ನು ಭರ್ತಿಮಾಡಿ 17-6-2017 ಶನಿವಾರದ ಒಳಗೆ ಕಳಿಸಿ.
* ವಿಳಾಸ:
ನೀನಾಸಮ್ ರಂಗಶಿಕ್ಷಣ ಕೇಂದ್ರ,
ಹೆಗ್ಗೋಡು, ಸಾಗರ,
ಶಿವಮೊಗ್ಗ 577 417
* ದಿನಾಂಕ 24 ಮತ್ತು 25 ಜೂನ್ 2017 ಶನಿವಾರ ಬೆಳಿಗ್ಗೆಯಿಂದ ನಡೆಯುವ ಆಯ್ಕೆಯ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ವೆಚ್ಚದಲ್ಲೇ ಹೆಗ್ಗೋಡಿಗೆ ಬಂದು ಹಾಜರಿರಬೇಕು.
ನೀನಾಸಮ್ ರಂಗಶಿಕ್ಷಣ ಕೇಂದ್ರದ ಒಂದು ವರ್ಷದ ತರಬೇತಿಗೆ ಅರ್ಜಿ ಸಲ್ಲಿಸುವ ವಿಧಾನ
* ಈ ಜಾಲತಾಣದಲ್ಲಿ ಮೂರು ಪ್ರತ್ಯೇಕ ಕಡತಗಳಲ್ಲಿರುವ ಕೇಂದ್ರದ ಪರಿಚಯ ಪತ್ರ, ಅರ್ಜಿ ಫಾರಂ, ಶುಲ್ಕ ಮತ್ತು ಸಂದರ್ಶನದ ವಿವರಗಳು - ಇವನ್ನು ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಿ.
* ಅಂತರ್ಜಾಲದ ಸಂಪರ್ಕ ಇಲ್ಲದವರು ಕೆಳಗಿರುವ ನೀನಾಸಮ್ ವಿಳಾಸಕ್ಕೆ ಕಾಗದ ಬರೆದು ಉಚಿತವಾಗಿ ಕೇಂದ್ರದ ಪರಿಚಯ ಪತ್ರ, ಅರ್ಜಿ ಫಾರಂ, ಶುಲ್ಕ ಮತ್ತು ಸಂದರ್ಶನದ ವಿವರಗಳು - ಇವನ್ನು ತರಿಸಿಕೊಳ್ಳಬಹುದು.
* ವಿವರಗಳನ್ನು ಓದಿ ಅರ್ಥ ಮಾಡಿಕೊಂಡು ನೀವು ಅರ್ಜಿ ಸಲ್ಲಿಸಬಹುದೆ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.
* ಅರ್ಜಿಫಾರಂನ್ನು ಪ್ರಿಂಟ್ ಮಾಡಿಕೊಂಡು ಅದನ್ನು ನಿಮ್ಮದೇ ಹಸ್ತಾಕ್ಷರದಲ್ಲಿ ತುಂಬಿ.
* ಅದರಲ್ಲಿರುವ ಎಲ್ಲ ಲಗತ್ತುಗಳೊಂದಿಗೆ, ರೂ. 500 ಅರ್ಜಿ ಶುಲ್ಕದ ಡಿಡಿ ಸಮೇತ (ನೀನಾಸಮ್ ರಂಗಶಿಕ್ಷಣ ಕೇಂದ್ರ ಎಂಬ ಹೆಸರಿಗೆ, ಕರ್ನಾಟಕ ಬ್ಯಾಂಕ್ ಹೆಗ್ಗೋಡು ಶಾಖೆ ಅಥವಾ ಬೇರಾವುದೇ ಬ್ಯಾಂಕಿನ ಸಾಗರ ಶಾಖೆಯಲ್ಲಿ ಸಂದಾಯವಾಗುವಂತೆ), ನೀನಾಸಮ್ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ, ಕರ್ನಾಟಕ 577 417 - ಇಲ್ಲಿಗೆ ರಿಜಿಸ್ಟರ್ಡ್ ಅಂಚೆ ಮೂಲಕ ರವಾನಿಸಿ..
* ಅಂತರ್ಜಾಲದ ಮೂಲಕ ಅಥವಾ ಈಮೈಲ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಇರುವುದಿಲ್ಲ.
* ಅರ್ಜಿ ನಮಗೆ ತಲುಪಲು ಕಡೆಯ ದಿನಾಂಕ 17-06-2017.
* ಸಂದರ್ಶನಕ್ಕೆ ಪ್ರತ್ಯೇಕ ಕರೆಯೋಲೆ ಕಳಿಸುವುದಿಲ್ಲ; ಜತೆಗಿರುವ ಪತ್ರದಲ್ಲಿ ಸೂಚಿಸಿರುವ ಪ್ರಕಾರ ಸಿದ್ಧತೆ ಮಾಡಿಕೊಂಡು ಸಂದರ್ಶನಕ್ಕೆ ಬರತಕ್ಕದ್ದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications