ಕಾಗೋಡು ತಿಮ್ಮಪ್ಪರನ್ನು ಜೆಡಿಎಸ್ ಪಕ್ಷದಿಂದ ಮಂತ್ರಿ ಮಾಡಲು ಸಿದ್ಧ: ಎಚ್ಡಿಕೆ
ಸಾಗರ, ಅಕ್ಟೋಬರ್ 30: ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಹಿರಿಯ ರಾಜಕೀಯ ಮುತ್ಸಧಿ ಕಾಗೋಡು ತಿಮ್ಮಪ್ಪ ಅವರನ್ನು ಜೆಡಿಎಸ್ ಖೋಟಾದಿಂದ ಮಂತ್ರಿ ಮಾಡಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸಾಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಗೋಡು ತಿಮ್ಮಪ್ಪ ಅವರು ಒಪ್ಪುವುದಿರೆ ಅವರನ್ನು ಪರಿಷತ್ಗೆ ನೇಮಿಸಲೂ ನಾವು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕಾಗೋಡು ತಿಮ್ಮಪ್ಪ ಅವರ ಹಿರಿತವನ್ನು ಕೊಂಡಾಡಿದ ಕುಮಾರಸ್ವಾಮಿ ಅವರು, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಅವರ ಮಾರ್ಗದರ್ಶನದಲ್ಲಿ ಇತರರು ಉತ್ತಮವಾಗಿ ಕೆಲಸ ಮಾಡಲೆಂದು, ಅವರ ಉಪಸ್ಥಿತಿ ಇದ್ದರೆ ಕಿರಿಯರು ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದರು.
ಸಾಗರದ ಪ್ರಚಾರ ಸಭೆಯಲ್ಲಿ ಕುಮಾರಸ್ವಾಮಿ ಅವರು ಮಾತನಾಡಬೇಕಾದರೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಕಾಗೋಡು ತಿಮ್ಮಪ್ಪ ಅವರಿಗೆ ಸರ್ಕಾರದಲ್ಲಿ ಉನ್ನತ ಜವಾಬ್ದಾರಿ ನೀಡಿ ಎಂದು ಆಗ್ರಹಿಸಿದಾಗ ಕುಮಾರಸ್ವಾಮಿ ಈ ಮಾತುಗಳನ್ನು ಹೇಳಿದರು.

'ಜೆಡಿಎಸ್ ಪಕ್ಷದಿಂದಲೇ ಮಂತ್ರಿ ಮಾಡ್ತೇನೆ'
ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಜೆಡಿಎಸ್ ಪಕ್ಷ ಇನ್ನೂ ಖಾತೆಯನ್ನು ಹಾಗೆ ಇಟ್ಟುಕೊಂಡಿದ್ದೇವೆ. ಅದನ್ನೇ ಕಾಗೋಡು ತಿಮ್ಮಪ್ಪ ಅವರಿಗೆ ನೀಡಲು ನಾನು ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ಕಾಗೋಡು ಮೇಲೆ ಪೂಜ್ಯ ಭಾವ ಇದೆ: ಎಚ್ಡಿಕೆ
ಕಾಗೋಡು ಅವರು ನೇರವಾದಿ ಅವರದ್ದು ಏನಿದ್ದರೂ ನೇರ ಮಾತು, ಅಂತಹವರು ರಾಜಕೀಯದಲ್ಲಿ ಬಲು ಅಪರೂಪ. ಅವರ ಬಗ್ಗೆ ನನಗೆ ಪೂಜ್ಯ ಭಾವನೆ ಇದೆ. ಅವರು ತಯಾರಿದ್ದರೆ ಮಂತ್ರಿ ಮಾಡಲು ಸಿದ್ಧ ಎಂದು ಕುಮಾರಸ್ವಾಮಿ ಅವರು ಈ ಸಮಯದಲ್ಲಿ ಹೇಳಿದರು. ಕುಮಾರಸ್ವಾಮಿ ಮಾತಿಗೆ ಭಾರಿ ಕರತಾಡನ ಕೇಳಿಬಂತು.

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಕಾಗೋಡು
ಕಾಂಗ್ರೆಸ್ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಾಗರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿಯ ಹರತಾಳು ಹಾಲಪ್ಪ ವಿರುದ್ಧ ಸುಮಾರು 8000 ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.

ಲೋಕಸಭೆ ಚುನಾವಣೆ ಸೀಟು
ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ಅವರಿಗೆ ಲೋಕಸಭೆ ಚುನಾವಣೆ ಸೀಟು ಕೊಡಬೇಕೆಂದು ಆರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದರು ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯು ಮಧು ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿತು. ಇದೀಗತ ಮಧು ಬಂಗಾರಪ್ಪ ಅವರ ಪರ ಕಾಗೋಡು ಅವರು ಪ್ರಚಾರ ಮಾಡುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications