ಅಕ್ರಮ ಮರಳುಗಾರಿಕೆ ತಡೆಯಲು ಸಿಬ್ಬಂದಿಗಳ ಕೊರತೆ: ಅಭಿನವ್ ಖರೆ
ಶಿವಮೊಗ್ಗ, ಫೆಬ್ರವರಿ 9: ಅಕ್ರಮ ಮರಳುಗಾರಿಕೆಯನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ದಾಳಿ ನಡೆಸುತ್ತಿದ್ದರೂ ಸಹ ಕೆಲವು ಸಿಬ್ಬಂದಿಗಳ ಕೊರತೆಯಿಂದಾಗಿ ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಿಲ್ಲವೆಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ತಿಳಿಸಿದರು.
ಅವರು ಪ್ರೆಸ್ ಟ್ರಸ್ಟ್ ನಲ್ಲಿ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಅಕ್ರಮ ಮರಳುಗಾರಿಕೆಯನ್ನ ತಡೆಯಲು ಹಲವು ಇಲಾಖೆಗಳಿವೆ. ಆದರೆ ಅವರಲ್ಲೂ ಸಹ ಸಿಬ್ಬಂದಿಯ ಕೊರತೆಯ ಜೊತೆಗೆ ದಾಳಿ ನಡೆಸುವ ಅಧಿಕಾರವಿಲ್ಲದಾಗಿದೆ.
ಹಾಗಾಗಿ ದಾಳಿಯ ಜವಬ್ದಾರಿಯು ಸಹ ಪೋಲೀಸ್ ಇಲಾಖೆಯ ಹೆಗಲಮೇಲೆ ಬಿದ್ದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಅಕ್ರಮ ಮರಳುಗಾರಿಕೆ ತಡೆಯಬೇಕಾಗಿದೆ. ಸಾಕಷ್ಟು ಸಿಬ್ಬಂದಿಯ ಕೊರತೆ ನಮ್ಮಲ್ಲೂ ಇರುವುದರಿಂದ ಅಕ್ರಮ ಮರಳುಗಾರಿಕೆಯನ್ನ ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತಿಲ್ಲವೆಂದು ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ತಿಳಿಸಿದರು.

ಇಷ್ಟೆಲ್ಲಾ ತೊಂದರೆಯ ನಡುವೆಯೂ ಸಹ ಅಕ್ರಮ ಮರಳುಗಾರಿಕೆಯನ್ನ ತಡೆಯಲು ಇಲಾಖೆ ಪಣತೊಟ್ಟಿದೆ. ಆದರೆ ಅಕ್ರಮ ಮರಳುಗಾರಿಕೆಯಲ್ಲಿ ಪೊಲೀಸ್ ಇಲಾಖೆ ಮೇಲೆ ಗೂಬೆ ಕೂರಿಸಲಾಗುತ್ತಿದೆ. ನಾವು ಒಂದು ದಾಳಿ ನಡೆಸಲು ಮೂರು ರಾತ್ರಿ ಫೀಲ್ಡ್ ನಲ್ಲಿ ಕೆಲಸ ಮಾಡಬೇಕಾಗುತ್ತದೆ.
ಜೊತೆಗೆ ಜನರ ಸಹಾಯವೂ ಸಹ ನಮಗೆ ಬೇಕು. ಆದರೆ ಅಕ್ರಮ ಮರಳು ಸಾಗಾಣಿಕೆ ಮಾಡುವ ವ್ಯಕ್ತಿ ಪೊಲೀಸ್ ಇಲಾಖೆಗೂ ಹಣ ನೀಡಿ ಬಂದಿದ್ದೇವೆ ಎಂದು ಅಪಪ್ರಚಾರದಿಂದ ಜನರ ಮನದಲ್ಲೂ ಸಹ ಇಲಾಖೆ ಬಗ್ಗೆ ಅಪನಂಬಿಕೆ ಮೂಡಿದೆ.
ನಮ್ಮ ಮೇಲಾಧಿಕಾರಿಗಳಿಗೂ ದೂರು ನೀಡುವ ಜೊತೆಗೆ ಇತರೆ ಇಲಾಖೆಗೂ ಮಾಹಿತಿ ನೀಡಬಹುದು.ನಮ್ಮ ಮೇಲೆ ನಂಬಿಕೆ ಇಲ್ಲವೆಂದರೆ ನಮ್ಮ ಐಜಿ ಅಥವಾ ಡಿಐಜಿಗೂ ಜನರು ಪೋನ್ ಮಾಡಿ ಅಕ್ರಮ ಮರಳುಗಾರಿಕೆ ಬಗ್ಗೆ ಮಾಹಿತಿ ನೀಡಬಹುದು, ಅಥವಾ ಜಿಲಾಲಾಧಿಕಾರಿ, ಪಿಡಬ್ಲ್ಯೂಡಿ, ಗಣಿ ಮತ್ತು ವಿಜ್ಞಾನ, ಅರಣ್ಯ ಇಲಾಖೆಗೂ ಮಾಹಿತಿ ಒದಗಿಸಬಹುದು ಎಂದರು.
ಆಯನೂರು ಆಪಾದನೆಯಿಂದ 10 ಪಟ್ಟು ಹೆಚ್ಚು ಕೆಲಸ ಜಾಸ್ತಿ ಆಗಿದೆ.ಆಯನೂರು ಮಂಜುನಾಥ್ ಸಹ್ಯಾದ್ರಿ ಉತ್ಸವ ಹಾಗೂ ಪತ್ರಿಕಾಗೋಷ್ಠಿಯಲ್ಲಿಯೂ ಇಲಾಖೆ ಅಕ್ರಮ ಮರಳುಗಾರಿಕೆ ವಿರುದ್ದ ಮಾತನಾಡಿದ್ದರು ಈ ಕುರಿತು ತಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು, ನಮ್ಮ ಬಗ್ಗೆ ಅಪಾದನೆ ಮಾಡಿರುವುದಕ್ಕೆ ಅವರಿಗೆ ಧನ್ಯವಾದಗಳು ಸಲ್ಲಿಸುವೆ. ಜೊತೆಗೆ ಅವರ ಅಪಾಧನೆಯ ಮೇರೆಗೆ ನಾವು ಈ ಹಿಂದಿನದಕ್ಕಿಂತ 10 ಪಟ್ಟು ಹೆಚ್ಚು ಕೆಲಸ ಮಾಡಲು ಸಾಧ್ಯವಾಗಿದೆ ಎಂದರು.
ಅಕ್ರಮ ಮರಳುಗಾರಿಕೆ ಪ್ರಕರಣ ತಡೆಯಲು ಪ್ರಕರಣ ಎಷ್ಟು ಗೊತ್ತಾ?: 2017 ರಲ್ಲಿ 315 ಅಕ್ರಮ ಮರಳುಗಾರಿಕೆ ಪ್ರಕರಣಗಳು ದಾಖಲಾಗಿಸಿದ್ದು, 7 ಕೋಟಿ ಹಣ ದಂಡ ವಸೂಲಿ ಮಾಡಲಾಗಿದೆ.
2018 ರಲ್ಲಿ ವಿಧಾನ ಸಭಾ ಚುನಾವಣೆ ಹಾಗೂ ಲೋಕಸಭಾ ಉಪ ಚುನಾವಣೆಯನ್ನ ಯಶಸ್ವಿಯಾಗಿ ನಡೆಸುವ ಸಂಬಂಧ ಅಕ್ರಮ ಮರಳುಗಾರಿಕೆ ಪ್ರಕರಣ ಕಡಿಮೆಯಾಗಿದೆ.2018 ರಲ್ಲಿ 180 ಪ್ರಕರಣ ಅಕ್ರಮ ಮರಳುಗಾರಿಕೆ ಪ್ರಕರಣ ದಾಖಲಾಗಿಸಿ 3 ಕೋಟಿ ಹಣ ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications