ನಾಮಪತ್ರ ಸಲ್ಲಿಸಿ, ಮತಯಾಚನೆಗಿಳಿದ ಗೀತಾ ಶಿವಣ್ಣ
ಶಿವಮೊಗ್ಗ, ಮಾ.25 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪರ ಪುತ್ರಿ, ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರು ಮತಯಾಚನೆ ಆರಂಭಿಸಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಚುನಾವಣಾ ಪ್ರಚಾರ ಕಾರ್ಯದಲ್ಲಿ ಗೀತಾ ಅವರು ನಿರತರಾಗಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು ಸೋಮವಾರ ಮಧ್ಯಾಹ್ನ ನಗರದ ಡಿ.ಸಿ. ಕಚೇರಿಯಲ್ಲಿ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ರವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ 'ಸಂವಿಧಾನದ ವಿಧಿ ವಿಧಾನಗಳಿಗೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ' ಎಂದು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಸಹಿ ಹಾಕಿದರು. ಈ ಸಂದರ್ಭದಲ್ಲಿ ಪತಿ, ನಟ ಶಿವರಾಜ್ ಕುಮಾರ್, ಶಾಸಕ ಜಮೀರ್ ಅಹ್ಮದ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಚಿಕ್ಕೇಗೌಡ ಉಪಸ್ಥಿತರಿದ್ದರು.
ಉಳಿದಂತೆ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕಾ, ಭದ್ರಾವತಿ ಕ್ಷೇತ್ರದ ಶಾಸಕ ಅಪ್ಪಾಜಿಗೌಡ, ದಾವಣಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಹಿಮಾ ಪಟೇಲ್, ಚಿತ್ರನಟ ವಿನೋದ್ ಪ್ರಭಾಕರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರ ಮೆರವಣಿಗೆ ಚಿತ್ರಗಳು ಇನ್ನಷ್ಟು ಮಾಹಿತಿ ಮುಂದಿದೆ. [ಚಿತ್ರಗಳ ಕೃಪೆ: ಶಿವು ಅಡ್ಡಾ.ಕಾಂ]

ಬೆಂಗಳೂರಿನಲ್ಲಿ ಡಾ. ರಾಜ್ ಸಮಾಧಿಗೆ ನಮನ
ಗೀತಾ ಶಿವರಾಜ್ ದಂಪತಿ ಭಾನುವಾರದಂದು ಮಲ್ಲೇಶ್ವರದ ಸರ್ಕಲ್ ಮಾರಮ್ಮ, ಗಂಗಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪತಿ ಶಿವರಾಜ್ಕುಮಾರ್ ಜತೆ ರಾಜ್ ಕುಮಾರ್ ಸಮಾಧಿಗೆ ತೆರಳಿ ಅಲ್ಲಿಯೂ ಕೂಡ ಪೂಜೆ ಸಲ್ಲಿಸಿದ್ದರು. ಸೋಮವಾರ ಬೆಳಗ್ಗೆ ಕೋಟೆ ಗಣೇಶನ ಗುಡಿ, ಮಾರಿಕಾಂಬ ದೇವಾಲಯ, ಸೇಕ್ರೇಡ್ ಹಾರ್ಟ್ ಚರ್ಚ್ ಹಾಗೂ ಮಸೀದಿಗೆ ತೆರಳಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು

ನಾಮಪತ್ರ ಸಲ್ಲಿಕೆಗೂ ಮುನ್ನ ಮೆರವಣಿಗೆ
ನಾಮಪತ್ರ ಸಲ್ಲಿಕೆಗೂ ಮುನ್ನ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಅಭ್ಯರ್ಥಿಯ ಮೆರವಣಿಗೆ ನಡೆಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಆರಂಭವಾದ ಮೆರವಣಿಗೆಯು ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ಬಿ.ಎಚ್.ರಸ್ತೆ, ಎ.ಎ.ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತ, ಬಾಲರಾಜ್ ಅರಸ್ ರಸ್ತೆಯ ಮೂಲಕ ಮಹಾವೀರ ವೃತ್ತಕ್ಕೆ ಆಗಮಿಸಿತು.ಅಲ್ಲಿಂದ ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಪೊಲೀಸರು ಡಿ.ಸಿ. ಕಚೇರಿಯ ಒಳಕ್ಕೆ ಪ್ರವೇಶಾವಕಾಶ ನೀಡಿದರು.

ಬೃಹತ್ ಮೆರವಣಿಗೆಯಿಂದ ಸಂಚಾರ ಅಸ್ತವ್ಯಸ್ತ
ಮೆರವಣಿಗೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು ಪರದಾಡುವಂತಾಯಿತು. ಮುಖ್ಯ ರಸ್ತೆಗಳಿಗೆ ಹೊಂದಿಕೊಂಡಂತಿದ್ದ ಸಮಾನಾಂತರ ರಸ್ತೆಗಳಲ್ಲಿ ವಾಹನಗಳು ಸಂಚರಿಸುತ್ತಿದ್ದ ದೃಶ್ಯ ಕಂಡುಬಂದಿತು. ಆದರೆ ಟ್ರಾಫಿಕ್ ಜಾಮ್ ಸರ್ವೇ ಸಾಮಾನ್ಯವಾಗಿತ್ತು. ಸುಗಮ ವಾಹನ ಸಂಚಾರಕ್ಕೆ ಪೊಲೀಸರು ಹರಸಾಹಸ ಪಡುವಂತಾಯಿತು.

ಗೀತಾ -ಶಿವರಾಜ್ ಪರ ಬಹುಪರಾಕ್ ಘೋಷಣೆ
ಮೆರವಣಿಗೆಯಲ್ಲಿ ಚಿತ್ರ ನಟರಾದ ಶಿವರಾಜ್ ಕುಮಾರ್, ವಿನೋದ್ ಪ್ರಭಾಕರ್, ಮಧು ಬಂಗಾರಪ್ಪ, ಅಭ್ಯರ್ಥಿ ಗೀತಾ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ಶಿವರಾಜ್ ಕುಮಾರ್ ಗೆ ಹಸ್ತಲಾಘವ ನೀಡಲು ಅಭಿಮಾನಿಗಳು ಮುಗಿಬೀಳುತ್ತಿದ್ದ ದೃಶ್ಯ ಕಂಡುಬಂದಿತು. ಮಹಾವೀರ ವೃತ್ತದಲ್ಲಿ ಅಭಿಮಾನಿಗಳ ನಡುವಿನಿಂದ ಜೀಪ್ ನಿಂದಿಳಿದು ಡಿ.ಸಿ. ಕಚೇರಿ ಒಳಗೆ ಪ್ರವೇಶಿಸಲು ಶಿವರಾಜ್ ಕುಮಾರ್ ಅಕ್ಷರಶಃ ಪರದಾಡುವಂತಾಯಿತು

ಗೀತಾ ಪರ ಜೆಡಿಎಸ್ ಕಾರ್ಯಕರ್ತರ ದಂಡು
ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕಾ, ಭದ್ರಾವತಿ ಕ್ಷೇತ್ರದ ಶಾಸಕ ಅಪ್ಪಾಜಿಗೌಡ, ದಾವಣಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಹಿಮಾ ಪಟೇಲ್, ಚಿತ್ರನಟ ವಿನೋದ್ ಪ್ರಭಾಕರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಮಂಗಳವಾರದಿಂದ ಆರಂಭಗೊಂಡಿರುವ ಪ್ರಚಾರ ಕಾರ್ಯದಲ್ಲೂ ಇವರುಗಳು ಸಾಥ್ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications