ಶಿವಮೊಗ್ಗ: ಒತ್ತಾಯದಿಂದ ಬಂದ್ ಮಾಡಿಸದಂತೆ ಪೊಲೀಸರಿಂದ ಎಚ್ಚರ

Recommended Video

      ಕರ್ನಾಟಕ ಬಂದ್ ಹಿನ್ನೆಲೆ ಶಿವಮೊಗ್ಗದ ಪೊಲೀಸರು ಪ್ರತಿಭಟನಾಕಾರರಿಗೆ ಕೊಟ್ಟಿದ್ದಾರೆ ವಾರ್ನಿಂಗ್ | Oneindia Kannada

      ಶಿವಮೊಗ್ಗ, ಮೇ.28 : ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ, ಬಿಜೆಪಿ ಕರೆ ನೀಡಿರುವ ಬಂದ್ ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಮೊಗ್ಗದಲ್ಲೂ ಬಂದ್ ನೀರಸವಾಗಿದೆ. ಈ ಮಧ್ಯೆ, ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

      ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

      In Pics : ರೈತರ ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್

      ಶಿವಮೂರ್ತಿ ಸರ್ಕಲ್ ನಿಂದ ಮೆರವಣಿಗೆ ಆರಂಭಿಸಿದ ಬಿಜೆಪಿ ಕೆಲ ಕಾರ್ಯಕರ್ತರು, ಮಹಾವೀರ ಜೈನ್ ಸರ್ಕಲ್ ನಲ್ಲಿ ಅಂಗಡಿ ಮುಚ್ಚುವಂತೆ ಒತ್ತಾಯಿಸಿದರು. ಬಸ್ ಓಡಿಸದಂತೆ ನಗರ ಸಾರಿಗೆ ಬಸ್ ಚಾಲಕನಿಗೆ ಎಚ್ಚರಿಸಿದರು.

      In shivamogga police have warned the protesters dont force to bandh

      ಈ ಮಧ್ಯೆ, ಒತ್ತಾಯವಾಗಿ ಬಂದ್ ಮಾಡಿಸದಂತೆ ಪೊಲೀಸರು ಮೈಕ್ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದಾರೆ. ನಗರದಲ್ಲಿ ಅಂಗಡಿ ಮುಂಗಟ್ಟು ತೆರೆಯಲಾಗುತ್ತಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಎಂದಿನಂತೆ ಇದೆ.

      ಬೆಳಗ್ಗೆಯಿಂದ ಕೆಎಸ್ಆರ್ ಟಿಸಿ ಬಸ್ ಗಳು ದೂರದೂರುಗಳಿಗೆ ಸಂಚರಿಸುತ್ತಿವೆ. ಭದ್ರಾವತಿ - ಶಿವಮೊಗ್ಗ ನಡುವಿನ ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ನಗರ ಸಂಚಾರ ಬಸ್ ಗಳು ಕೂಡ ಇತರೆ ದಿನಗಳಂತೆಯೇ ಸಂಚರಿಸುತ್ತಿವೆ. ಆಟೋ, ಟ್ರಾಕ್ಸ್ ಸೇವೆಗಳು ಸಾಮಾನ್ಯ ದಿನದಂತೆಯೇ ಇವೆ.

      In shivamogga police have warned the protesters dont force to bandh

      ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನು, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+