ಸಾಗರ: ಕೇಸರಿ ಬಾವುಟ ಹಿಡಿದು ವಿದ್ಯಾರ್ಥಿನಿಯರ ನರ್ತನ!
ಸಾಗರ, ಅಕ್ಟೋಬರ್ 08: ಇಲ್ಲಿನ ಪ್ರತಿಷ್ಠಿತ ಶ್ರೀಮತಿ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ನೃತ್ಯ ಮಾಡಿದ್ದಾರೆ.
ಆರೆಸ್ಸೆಸ್, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳ ಪಾಲಿಗೆ ಪವಿತ್ರವಾದ ಕೇಸರಿ ಬಾವುಟ (ಭಗವಾಧ್ವಜ) ಹಿಡಿದು ಕಾಲೇಜಿನಲ್ಲಿ ಹಾಡೊಂದಕ್ಕೆ ನರ್ತಿಸಿದ್ದಾರೆ.

ಶನಿವಾರದಂದು ಇಂದಿರಾಗಾಂಧಿ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ವೇದಿಕೆ ಉದ್ಘಾಟನಾ ಸಮಾರಂಭದಲ್ಲಿ ಜೈ ಭಜರಂಗ್ ಬೀಟ್ಸ್ಗೆ ವಿದ್ಯಾರ್ಥಿನಿಯರು ಬೋಲ್ಡ್ ಸ್ಟೆಪ್ ಹಾಕಿ ಶಕ್ತಿ ಪ್ರದರ್ಶನ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿದ ಸಂದರ್ಭದಲ್ಲಿ ಭಗವಾಧ್ವಜ ಹಿಡಿದು ಕುಣಿದ ವಿದ್ಯಾರ್ಥಿನಿಯರು ಕುತ್ತಿಗೆಯಲ್ಲಿ ಕೇಸರಿ ಶಾಲುಗಳು ಮತ್ತು ಕೈಯಲ್ಲಿ ಭಗವಾಧ್ವಜ ಹಿಡಿದು ನಲಿದಾಡಿದರು.
ನೆರೆದಿದ್ದ ಪ್ರೇಕ್ಷಕರ ಪೈಕಿ ಕಾಲೇಜಿನ ವಿದ್ಯಾರ್ಥಿನಿಯರಲ್ಲದೆ, ಆಡಳಿತ ಮಂಡಳಿ ಸದಸ್ಯರು ಇದ್ದರು. ಕಾಲೇಜಿನ ಆವರಣದೊಳಗೆ ನಡೆದ ಶಿಸ್ತಿನ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿನಿಯರು ಅಶಿಸ್ತು ತೋರಿರುವುದು ನಿಜಕ್ಕೂ ದುರಂತದ ಸಂಗತಿ ಎಂದು ವಿಡಿಯೋ ನೋಡಿದವರು ಹಲುಬಿದ್ದಾರೆ.
ಕಾಲೇಜಿನ ಆವರಣದೊಳಗೆ ಸಿ.ಸಿ ಕ್ಯಾಮರ ಇದ್ದು, ಇದೆಲ್ಲವೂ ಕಾಲೇಜಿನ ಪ್ರಿನ್ಸಿಪಾಲರ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಇನ್ನೂ ಕೆಲವರು ಪ್ರಶ್ನಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications