ಫೆ. 26 ರಿಂದ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
ಶಿವಮೊಗ್ಗ, ಜನವರಿ 30: ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭಿಸಲಾಗುತ್ತಿದೆ. 50 ದೇಶಗಳ 150 ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಇದರಲ್ಲಿ 32 ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದರು.
ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಫೆಬ್ರವರಿ 26 ರಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಂಠೀರವ ಸ್ಟುಡಿಯೋದಲ್ಲಿ ಉದ್ಘಾಟನೆಗೊಳ್ಳಲಿದೆ. ಮಾರ್ಚ್ 4 ರವರೆಗೆ ನಡೆಯುವ ಈ ಉತ್ಸವ ಬೆಂಗಳೂರಿನ ವಿವಿಧ ಮಾಲ್ ಗಳ 11 ಸ್ಕ್ರೀನ್ ನಲ್ಲಿ ನಡೆಯಲಿದೆ ಎಂದರು.
ಬೆಂಗಳೂರಿಗೆ ಸೀಮಿತಗೊಂಡ ಅಕಾಡೆಮಿಯನ್ನು ಇತರ ಜಿಲ್ಲೆಗಳಿಗೆ ತರಲು ಉದ್ದೇಶಿಸಲಾಗಿದೆ. ಐತಿಹಾಸಿಕ ಸ್ಥಳವಾದ ಚಿತ್ರದುರ್ಗ, ಬಿಜಾಪುರ ಮೊದಲಾದ ಸ್ಥಳಗಳಲ್ಲಿ ಲೈಬ್ರರಿ ತೆಗೆಯುವ ಮೂಲಕ ಕನ್ನಡ ಚಲನಚಿತ್ರ ನಡೆದು ಬಂದ ದಾರಿಯ ಇತಿಹಾಸವನ್ನು ತೋರಿಸಲಾಗುವುದು ಎಂದು ಹೇಳಿದರು.

ಪ್ರಾದೇಶಿಕ ಚಲನಚಿತ್ರೋತ್ಸವಕ್ಕೆ ಅಕಾಡೆಮಿ ಯೋಚನೆ ಮಾಡುತ್ತಿದ್ದು, ಶಿವಮೊಗ್ಗ, ಮಂಗಳೂರು, ಗುಲ್ಬರ್ಗ, ವಿಜಯಪುರ ಮೊದಲಾದ ಪ್ರದೇಶಗಳಲ್ಲಿ ತುಳು, ಕೊಡವ, ಬ್ಯಾರಿ, ಬಂಜಾರ, ಕೊಂಕಣಿ ಭಾಷೆಯ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡಲು ಈ ಚಲನಚಿತ್ರೋತ್ಸವನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಯುವ ಪ್ರತಿಭೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಗುರುತಿಸಿ ಐದಾರು ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡು, ಅನಿಮೇಷನ್ ಹಾಗೂ ಇತರೆ ವಿಷಯಗಳ ಕುರಿತು ಶಿಕ್ಷಣ ನೀಡಲಾಗುವುದು. ಪ್ರತಿ ವರ್ಷ ಅಕಾಡೆಮಿ ಸಿನಿಮಾ ಥಿಯೇಟರ್ ಆರಂಭಿಸಲಾಗುವುದು. ಇದಕ್ಕಾಗಿ ಬೆಂಗಳೂರಿನಲ್ಲಿ ಫಿಲಂ ಕಾಂಪ್ಲೆಕ್ಸ್ ತೆರಯುವ ಯೋಜನೆ ಇದೆ. ಜೊತೆಗೆ ಸಿನಿಮಾಗಳನ್ನು ಡಿಜಿಟಲೈಸೇಷನ್ ಮಾಡುವ ಯೋಜನೆಯನ್ನು ಅಕಾಡೆಮಿ ಹಮ್ಮಿಕೊಂಡಿದೆ ಎಂದರು.
ಪ್ರತಿವರ್ಷ ಹುಣಸೂರು ಕೃಷ್ಣಮೂರ್ತಿ, ವಿಷ್ಣುವರ್ದನ್, ಡಾ.ರಾಜ್ ಕುಮಾರ್ ಮೊದಲಾದ ಸಿನಿಮಾ ದಿಗ್ಗಜರ ಹೆಸರಿನಲ್ಲಿ ಚಲನಚಿತ್ರ ಅವಾರ್ಡ್ ಕಾರ್ಯಕ್ರಮವನ್ನು ಆರಂಭಿಸಲಾಗುವುದು, ಈ ವರ್ಷ ಶಿವಮೊಗ್ಗದಲ್ಲಿ ಆರಂಭಿಸಲಾಗುವುದು ಎಂದರು.
ಶಿವಮೊಗ್ಗಕ್ಕೆ ನಾನು 1986 ರಲ್ಲಿ ಹೊಸದಿಗಂತ ಚಿತ್ರದ ಸಮಯದಲ್ಲಿ ಆಗಮಿಸಿದ್ದೆ, ನನಗೆ ಶಿವಮೊಗ್ಗದ ನಂಟು ಉತ್ತಮವಾಗಿದೆ. ನಾನು ಮೂಲತಃ ಧಾರವಾಡದವನು ಎಂದ ಸುನೀಲ್ ಪುರಾಣಿಕ್, ಅಕಾಡೆಮಿ ಅಧ್ಯಕ್ಷನಾಗಿದ್ದು ಸಂತಸ ತಂದಿದೆ ಎಂದರು. ಕಳೆದ 22 ವರ್ಷದಿಂದ ಬಿಜೆಪಿ ಪಕ್ಷದಲ್ಲಿ ಇದ್ದರೂ ಯಾರು ನನ್ನನ್ನು ಗುರುತಿಸಿರಲಿಲ್ಲ. ಆದರೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ನನಗೆ ಅಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications