ಶಿವಮೊಗ್ಗ: ಶಂಕಿತ ಉಗ್ರರ ತೀವ್ರ ವಿಚಾರಣೆ: ಗುಪ್ತಚರ ಇಲಾಖೆ ಅಧಿಕಾರಿಗಳು ದೌಡು
ಶಿವಮೊಗ್ಗ, ಸೆಪ್ಟೆಂಬರ್, 23: ಐಸಿಸ್ ಜೊತೆ ನಂಟು ಹೊಂದಿರುವ ಶಂಕಿತ ಉಗ್ರರ ವಿಚಾರಣೆ ಬಿರುಸುಗೊಂಡಿದೆ. ರಾಜ್ಯ, ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಶಿವಮೊಗ್ಗದತ್ತ ಕಣ್ಣಿಟ್ಟಿವೆ. ಸರದಿಯಲ್ಲಿ ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಶಿವಮೊಗ್ಗದ ಸಯ್ಯದ್ ಯಾಸೀನ್ (21) ಮತ್ತು ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಬಂಧಿತ ಶಂಕಿತ ಉಗ್ರರಾಗಿದ್ದು, ಇವರ ವಿಚಾರಣೆ ತೀವ್ರಗೊಂಡಿದೆ. ತನಿಖಾ ಸಂಸ್ಥೆಗಳು ಶಂಕಿತ ಉಗ್ರರ ಬಳಿ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿವೆ.
ಶಂಕಿತ ಉಗ್ರರನ್ನು ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ಪೊಲೀಸರು ಶಂಕಿತರಿಂದ ಹೇಳಿಕೆ ಪಡೆದಿದ್ದು, ಶಿವಮೊಗ್ಗ, ಮಂಗಳೂರು ಸೇರಿ 11 ಕಡೆ ಮಹಜರ್ ನಡೆಸಿದ್ದಾರೆ. ಲಭ್ಯವಾದ ಸಾಕ್ಷ್ಯಾಧಾರಗಳ ಮೇಲೆ ವಿಚಾರಣೆ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಮತ್ತು ರಾಜ್ಯದ ಗುಪ್ತಚರ ಇಲಾಖೆ ಅಧಿಕಾರಿಗಳು ಯಾಸೀನ್ ಮತ್ತು ಮಾಜ್ನ ವಿಚಾರಣೆ ನಡೆಸುತ್ತಿದ್ದಾರೆ. ಇವರಿಬ್ಬರಿಗೂ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಲೇ ಇದ್ದಾರೆ. ಸ್ಫೋಟಕಗಳು, ಹಣಕಾಸು ನೆರವು, ಯಾರೆಲ್ಲ ಭಾಗಿ ಆಗಿದ್ದರು, ಯೋಜನಗಳು ಏನು ಎಂಬುದರ ಕುರಿತು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎನ್ನಲಾಗಿದೆ.

ಠಾಣೆಯೊಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಶಂಕಿತ ಉಗ್ರರ ವಿಚಾರಣೆ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯೊಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ದೂರು ನೀಡಲು ಬರುವವರು, ವಿವಿಧ ಪ್ರಕರಣಗಳ ಕುರಿತು ಮಾಹಿತಿ ಕೇಳಿಕೊಂಡು ಬರುವವರನ್ನು ಠಾಣೆಯ ಹೊರಗೆ ನಿಲ್ಲಿಸಿ, ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ದೂರುದಾರರಿಂದ ದೂರುಗಳನ್ನು ಸ್ವೀಕರಿಸಿ ಕಳುಹಿಸುತ್ತಿದ್ದಾರೆ. ಓರ್ವ ಪಿಎಸ್ಐ ಮತ್ತು ಸಿಬ್ಬಂದಿ ಠಾಣೆಯ ಹೊರಗಡೆ ನಿಂತುಕೊಂಡು ಅಲ್ಲಿಯೇ ಜನರನ್ನು ಮಾತನಾಡಿಸಿ ಹಿಂದಕ್ಕೆ ಕಳುಹಿಸುತ್ತಿದ್ದಾರೆ.

ಶಂಕಿತ ಉಗ್ರರ ಮೊಬೈಲ್ಗಳು ವಶಕ್ಕೆ
ಶಂಕಿತರು ಬಳಸುತ್ತಿದ್ದ ಮೊಬೈಲ್ ಫೋನ್ಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಶಂಕಿತ ಉಗ್ರರ ಫೋನ್ಗಳಲ್ಲಿ ಇರುವ ಮಾಹಿತಿ ಸಂಗ್ರಹ ಕಾರ್ಯವನ್ನು ಆರಂಭಿಸಿದ್ದಾರೆ. ಸೈಬರ್ ಅಪರಾಧ ಠಾಣೆ ಪೊಲೀಸರ ನೆರವಿನೊಂದಿಗೆ ಅತ್ಯಾಧುನಿಕ ಕಂಪ್ಯೂಟರ್ ಮತ್ತು ಉಪಕರಣ ಬಳಕೆ ಮಾಡಿಕೊಂಡು ಮೊಬೈಲ್ ಡಾಟಾ ರಿಕವರಿ ಮಾಡಲಾಗುತ್ತಿದೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications