ಹರ್ಷನ ಹತ್ಯೆಯನ್ನು ಹಿಜಾಬ್ ವಿವಾದ ಸೇರಿದಂತೆ ಎಲ್ಲಾ ಕೋನಗಳಲ್ಲಿ ತನಿಖೆ; ಗೃಹ ಸಚಿವ
ಶಿವಮೊಗ್ಗ, ಫೆಬ್ರವರಿ 22: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆಯ ಕುರಿತು ಕರ್ನಾಟಕದ ಶಿವಮೊಗ್ಗದಲ್ಲಿ ಹಿಂಸಾಚಾರದ ನಂತರ, ಹರ್ಷನ ಅಂತ್ಯಕ್ರಿಯೆಯ ಮೆರವಣಿಗೆಗೆ ಅನುಮತಿ ನೀಡುವ ನಿರ್ಧಾರಕ್ಕೆ ಸ್ಥಳೀಯ ಆಡಳಿತವನ್ನು ರಾಜ್ಯ ಸರ್ಕಾರ ಇಂದು ದೂಷಿಸಿದೆ.
ಇದೇ ವೇಳೆ ಶಿವಮೊಗ್ಗ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು, "ಹರ್ಷನ ಹತ್ಯೆಯನ್ನು ಹಿಜಾಬ್ ವಿವಾದ ಸೇರಿದಂತೆ ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುವುದು," ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈಗಾಗಲೇ 12 ಮಂದಿಯನ್ನು ಕಸ್ಟಡಿಯಲ್ಲಿಟ್ಟು ವಿಚಾರಣೆ ನಡೆಸಲಾಗುತ್ತಿದ್ದು, ಭಾನುವಾರ ರಾತ್ರಿ ಕಾರಿನಲ್ಲಿ ಬಂದ ತಂಡವೊಂದು ಚಾಕುವಿನಿಂದ ಇರಿದ 26 ವರ್ಷದ ಹರ್ಷ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆಗಳು ಮತ್ತು ಕಾಲೇಜುಗಳಲ್ಲಿನ ಹಿಜಾಬ್ ನಿರ್ಬಂಧಗಳ ಮೇಲಿನ ವಿವಾದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಕರ್ನಾಟಕ ಸರ್ಕಾರ ನಿನ್ನೆ ತಳ್ಳಿಹಾಕಿದೆ. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರ, ಹಿಜಾಬ್ ವಿವಾದದ ಹಿಂದೆ ಇರುವ ಸಂಸ್ಥೆಗಳು ಸಹ ತಪಾಸಣೆ ಅಡಿಯಲ್ಲಿದ್ದು, ಅವರ ಪಾತ್ರವನ್ನು ಸಹ ಪರಿಶೀಲಿಸಲಾಗುತ್ತಿದೆ. ನಿನ್ನೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಾನೂನು ಕ್ರಮ ಕ್ರಮಕೈಗೊಳ್ಳಲಾಗುವುದು ಗೃಹ ಸಚಿವರು ಹೇಳಿದರು.
ಸೋಮವಾರ ಹರ್ಷನ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿ ಅಂತಿಮ ವಿಧಿವಿಧಾನಗಳಿಗೆ ಕೊಂಡೊಯ್ಯುತ್ತಿದ್ದಾಗ ಹಿಂಸಾಚಾರ ಮತ್ತು ಬೆಂಕಿ ಹಚ್ಚಲಾಯಿತು. 8 ಕಿಮೀ ಉದ್ದದ ಶವಯಾತ್ರೆಯಲ್ಲಿ 5,000ಕ್ಕೂ ಹೆಚ್ಚು ಜನರು ಸೇರಿದ್ದರು. ಈ ವೇಳೆ ಕಾರುಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಫೋಟೋ ಜರ್ನಲಿಸ್ಟ್ ಮತ್ತು ಪೊಲೀಸ್ ಮಹಿಳೆ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಹಲವಾರು ದ್ವಿಚಕ್ರ ವಾಹನಗಳು ಹಾನಿಗೊಳಗಾಗಿವೆ.

ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಪ್ರಯೋಗಿಸಬೇಕಾಯಿತು ಮತ್ತು ಲಾಠಿ ಪ್ರಹಾರ ಮಾಡಬೇಕಾಯಿತು. ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ ಮತ್ತು ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಪ್ರಕ್ಷುಬ್ದ ಪರಿಸ್ಥಿತಿಯಲ್ಲಿ ಮೆರವಣಿಗೆಗೆ ಅನುಮತಿ ನೀಡಿದ ಬಗ್ಗೆ ಪ್ರಶ್ನೆಗಳಿಂದ ಕರ್ನಾಟಕ ಸರ್ಕಾರವು ದೂರ ಸರಿದಿದೆ.
ಹೆಚ್ಚು ಜನರು ಭೇಟಿ ನೀಡುತ್ತಿರುವುದನ್ನು ನೋಡಿ, ಮೃತದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗಲಾಗಿದೆ. ಇದು ಜಿಲ್ಲಾಡಳಿತದ ನಿರ್ಧಾರವಾಗಿದೆ ಎಂದ ಗೃಹ ಸಚಿವರು, ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
ಶಾಂತಿ ಕದಡಲು ಯಾವುದೇ ಅವಕಾಶ ನೀಡಬೇಡಿ ಎಂದು ನಾವು ಜನರಿಗೆ ಮನವಿ ಮಾಡುತ್ತೇವೆ. ಸರ್ಕಾರ ಖಂಡಿತವಾಗಿಯೂ ಅಪರಾಧಿಗಳನ್ನು ಬಂಧಿಸಿ ಅವರಿಗೆ ಸೂಕ್ತ ಶಿಕ್ಷೆಯನ್ನು ನೀಡುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಈ ರೀತಿಯ ಕೊಲೆಗಳು ನಿಲ್ಲಬೇಕು ಮತ್ತು ಇದು ಹರ್ಷನ ಹತ್ಯೆಯೊಂದಿಗೆ ಕೊನೆಗೊಳ್ಳಬೇಕು. ಇದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಬದ್ಧತೆಯಾಗಿದೆ. ನಾವು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತಿದ್ದೇವೆ, ಶೀಘ್ರದಲ್ಲೇ ಸತ್ಯ ಹೊರಬರುತ್ತದೆ ಎಂದು ಸಚಿವರು ತಿಳಿಸಿದರು.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹರ್ಷ ಕೊಲೆಯಾಗಿದ್ದಾನೆ ಎಂದು ಪೊಲೀಸರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಹಿಂದಿನ ದ್ವೇಷಕ್ಕೆ ಸಂಬಂಧಿಸಿದಂತೆ ನಡೆದಿದೆ ಎಂದು ನಾವು ಬಲವಾಗಿ ನಂಬಿದ್ದೇವೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿ ಡಾ.ಕೆ. ತ್ಯಾಗರಾಜನ್ ಹೇಳಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು ಹರ್ಷ ಹತ್ಯೆಯ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಗೆ ಒತ್ತಾಯಿಸಿದ್ದಾರೆ.












Click it and Unblock the Notifications