ಕಾಂಗ್ರೆಸ್-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರಪ್ಪ

ಶಿವಮೊಗ್ಗ, ಮೇ 18: ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಹಲವು ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ನಾಳೆ ವಿಶ್ವಾಸಮತ ಸಿಕ್ಕೇ ಸಿಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸಮತ ಸಾಬೀತು ಮಾಡಲು ನಮ್ಮಲ್ಲಿ ತಂತ್ರಗಳು ಇವೆ, ವಿಪ್ ಜಾರಿ, ಗೈರು ಹಾಜರಿ‌ ಇತ್ಯಾದಿ ಇವೆ.‌ ಯಾವುದೋ ತಂತ್ರ ಸಫಲವಾಗಲಿದೆ ಎಂದು ಅವರು ಹೇಳಿದರು.

78 ಸೀಟು ಬಂದಿದ್ದರೂ 38 ಸೀಟು ಗೆದ್ದಿರುವ ಜೆಡಿಎಸ್ ಗೆ ಅಧಿಕಾರ ಕೊಡಲು ಕಾಂಗ್ರೆಸ್ ಮುಂದಾಗಿದೆ. ಜೆಡಿಎಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಮುಂದಾಗಿದೆ‌. ಇದು ಕಾಂಗ್ರೆಸ್ ನ ಹಲವು ಶಾಸಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಈ ಅಪವಿತ್ರ ಮೈತ್ರಿಗೆ ಕಾಂಗ್ರೆಸ್ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

JDS-Congress MLAs were in BJP contanct: Eshwarappa

ವಿಶ್ವಾಸಮತ ಸಿಕ್ಕೇ ಸಿಗುತ್ತೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲಿದ್ದಾರೆ. ರಾಜ್ಯದ ಜನತೆ 104 ಸ್ಥಾನ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚಿಸಿ ಆಡಳಿತ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+