ಮಲೆನಾಡಿನಲ್ಲಿ ಜೆಜೆಎಂ ಕಾಮಗಾರಿ: WTPಯ 11ನೇ ದಿನದ ‘ತಿಥಿ ಆಚರಿಸಿದ’ ಗ್ರಾಮಸ್ಥರು
ತೀರ್ಥಹಳ್ಳಿ ಮಾರ್ಚ್ 8: ತೀರ್ಥಹಳ್ಳಿಯ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್ ಜೀವನ್ ಮಿಷನ್ನ ನೀರು ಶುದ್ಧೀಕರಣ ಘಟಕ (WTP)ದ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ಹೊಸ ಸ್ವರೂಪಕ್ಕೆ ತಿರುಗಿತು.
"ಜನರ ಸಲಹೆಗಳಿಗೆ ಬೆಲೆ ನೀಡದೆ, ಜನಾಭಿಪ್ರಾಯಯವನ್ನು ಪೊಲೀಸರ ಮೂಲಕ ಹತ್ತಿಕ್ಕಿದ ಸರಕಾರ ನೀರಿನ ಶುದ್ಧೀಕರಣ ಘಟಕದ ಕಾಮಗಾರಿಗೆ ಚಾಲನೆ ನೀಡಿ 11 ದಿನಗಳ ತುಂಬಿದೆ. ಹೀಗಾಗಿ, ಶಿವರಾತ್ರಿಯ ಮುನ್ನಾದಿನಾಗಿರುವ ಇವತ್ತು ಜನರ ಆಶಯಗಳ ಸಾವಿನ ಸಾಂಕೇತಿಕವಾಗಿ ಪ್ರತಿಭಟನಾ ಸ್ಥಳದಲ್ಲಿ ತಿಥಿಯನ್ನು ಆಚರಿಸಲಾಯಿತು'' ಎಂದು ಪ್ರತಿಭಟನೆಯ ಹೊಣೆ ಹೊತ್ತಿರುವ ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿ ಹಾಗೂ ತಾಲೂಕು ರೈತ ಸಂಘ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ತೀರ್ಥಹಳ್ಳಿ- ಶೃಂಗೇರಿ ಸಂಪರ್ಕಿಸುವ ಹೆದ್ದಾರಿಯಲ್ಲಿ ಬರುವ ಕೋಡ್ಲು ಗ್ರಾಮದಲ್ಲಿ ಗ್ರಾಮಸ್ಥರು ತಮಗೆ ತೋಚಿದ ರೀತಿಯಲ್ಲಿ ಸರಕಾರದ ಕಾಮಗಾರಿಗೆ ಅಪರ ಕರ್ಮಗಳನ್ನು ನೆರವೇರಿಸಿದ್ದಾರೆ. ಬಾಳೆ ಎಲೆಯ ಮೇಲೆ ಕಾಮಗಾರಿಯ ಲಂಚದ ಸಂಕೇತವಾಗಿ ಹಣದ ನೋಟುಗಳು, ಜತೆಗೆ, ಮೊಟ್ಟೆ, ಮಾಂಸ, ಮದ್ಯವನ್ನು ಎಡೆಯ ರೂಪದಲ್ಲಿ ಇಡುವ ಮೂಲಕ ಕಾಮಗಾರಿಯನ್ನು ಲೇವಡಿ ಮಾಡಿದ್ಧಾರೆ.
"ಎಡೆ ಇಡುವ ಸಮಯದಲ್ಲಿ ರೈತರು ಬಾಯಿ ಬಡಿದುಕೊಳ್ಳುತ್ತಾ, ಹೊಗಳಿಕೆಯ ವಿಡಂಬನೆಯ ಮೂಲಕ ಭ್ರಷ್ಟ ವ್ಯವಸ್ಥೆಗೆ ಶಾಂತಿಯುತವಾಗಿ ಅರ್ಥೈಸುವ ಕೆಲಸ ಮಾಡಿದ್ದೇವೆ. ಈಗಲೂ ಕಾಲ ಮಿಂಚಿಲ್ಲ. ಕುಡಿಯುವ ನೀರಿನ ವಿಚಾರದಲ್ಲಿ ಸರಕಾರ ಹುಡುಗಾಟಿಕೆ ತೋರಿಸಬಾರದು'' ಎಂದು ರೈತ ನಾಯಕರು ಈ ಸಮಯದಲ್ಲಿ ಹಿತವಚನವನ್ನು ನೀಡಿದ್ದಾರೆ.
"ಸಾಂಕೇತಿಕವಾಗಿ ತಿಥಿ ನೆರವೇರಿಸುವ ಮೂಲಕ ಜನ ವಿರೋಧಿ ಸರಕಾರದ ಸಾವಿನ ಸೂತಕವನ್ನೂ ಕಳೆದುಕೊಂಡಿದ್ದೇವೆ. ನಾಳೆಯಿಂದ ಹೋರಾಟ ಹೊಸ ಹಾದಿಯಲ್ಲಿ ಕ್ರಮಿಸಲಿದೆ. ಅಂತಿಮವಾಗಿ ತಾಲೂಕಿನ ಪ್ರತಿಮನೆಗೂ ವೈಜ್ಞಾನಿಕವಾಗಿ ಕುಡಿಯುವ ನೀರು ತಲುಪುವವರೆಗೂ ಹೋರಾಟ ನಿಲ್ಲುವುದಿಲ್ಲ,'' ಎಂದು ಇದೇ ಸಮಯದಲ್ಲಿ ಸಮಿತಿ ಹಾಗೂ ರೈತ ಸಂಘದ ತಾಲೂಕು ಘಟಕ ತಿಳಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications