ಮೈದುಂಬಿದ ಜೋಗ ಜಲಪಾತ; ಹಳೆಯ ವಿಡಿಯೋ ವೈರಲ್
ಶಿವಮೊಗ್ಗ, ಜೂನ್ 18; ಶರಾವತಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಆದರೆ ಕೋವಿಡ್ ಲಾಕ್ಡೌನ್ ಕಾರಣ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ.
ಜಲಪಾತದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಕಳೆಗಟ್ಟಿವೆ. ಜೋರು ಮಳೆ, ದಟ್ಟ ಇಬ್ಬನಿಯ ನಡುವೆ ಜೋಗದ ವೈಭವ ಕಣ್ತುಂಬಿಕೊಳ್ಳುವುದು ಕಣ್ಣಿಗೆ ಸಡಗರ.
ಜೋಗ ಜಲಪಾತ ಕಣ್ತುಂಬಿಕೊಳ್ಳಲು ಇದು ಒಳ್ಳೆಯ ಸಮಯ. ಬೆಂಗಳೂರು ಸೇರಿದಂತೆ ದೂರದ ಊರುಗಳಿಂದ ಜೋಗಕ್ಕೆ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದರು.

ಪ್ರತಿ ಮಳೆಗಾಲದ ವೀಕೆಂಡ್ ಸಂದರ್ಭ ಜೋಗ ನೋಡಲು ಬರುವ ಜನರು ಗಂಟೆಗಟ್ಟಲೆ ಕ್ಯೂ ನಿಂತು ಜಲಪಾತ ವೀಕ್ಷಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್ ಮತ್ತು ಲಾಕ್ಡೌನ್ ಪರಿಣಾಮ ಜೋಗ ಜಲಾಪತ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.
ವಿಡಿಯೋದಲ್ಲಿ ಹಳೆಯ ಜೋಗ; ಶರಾವತಿ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದಂತೆ ಜೋಗ ಜಲಪಾತ ಭೋರ್ಗರೆಯುತ್ತಿದೆ ಎಂದು ನಕಲಿ ವಿಡಿಯೋ, ಫೋಟೋಗಳನ್ನು ಶೇರ್ ಮಾಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಗೇಟ್ ತನಕ ಬಂದು ನಿರಾಸೆಯಿಂದ ವಾಪಸ್ ಹೋಗುತ್ತಿದ್ದಾರೆ. ಕೆಲವರು ತಮ್ಮನ್ನು ಒಳಗೆ ಬಿಡುವಂತೆ ಭದ್ರತಾ ಸಿಬ್ಬಂದಿಗಳ ಜೊತೆ ಜೊತೆ ಜಗಳವಾಡುತ್ತಿದ್ದಾರೆ.
ಭಾರಿ ಮಳೆ; ಹೊಸನಗರ ತಾಲೂಕಿನಲ್ಲಿ ಕಳೆದ ಎರಡು ದಿನದಿಂದ 300 ಮಿ. ಮೀ. ನಷ್ಟು ಮಳೆಯಾಗುತ್ತಿದೆ. ಇದರಿಂದ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಿಂಗನಮಕ್ಕಿ ಜಲಾಶಯಕ್ಕೆ 45 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಜಲಾಶಯ ಭರ್ತಿಯಾಗಿ ಭಾರೀ ಪ್ರಮಾಣದಲ್ಲಿ ನೀರು ಹೊರಗೆ ಬಿಟ್ಟರೆ ಮಾತ್ರ ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಇರುವಂತೆ ಜೋಗದಲ್ಲಿ ನೀರು ಹರಿಯಲಿದೆ. ಕೋವಿಡ್ ಕಠಿಣ ನಿಯಮ ಮುಂದುವರೆದರೆ ಈ ಬಾರಿ ಸಾರ್ವಜನಿಕರಿಗೆ ಜೋಗ ಜಲಪಾತದ ವೀಕ್ಷಣೆಗೆ ಅಸಾಧ್ಯವಾಗಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications