ಮೊದಲ ದಿನ ಜೋಗದ ಸೌಂದರ್ಯ ಕಣ್ತುಂಬಿಕೊಂಡ ಜನ
ಶಿವಮೊಗ್ಗ, ಜೂನ್ 28; ಕೋವಿಡ್ ಲಾಕ್ಡೌನ್ನಿಂದಾಗಿ ಬಂದ್ ಆಗಿದ್ದ ಜೋಗ ಜಲಪಾತಕ್ಕೆ ಇವತ್ತಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನ ನೂರಾರು ಪ್ರವಾಸಿರು ಜಲಪಾತದ ರಮಣೀಯತೆಯನ್ನು ಕಣ್ತುಂಬಿಕೊಂಡರು.
ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಜಲಪಾತದ ವ್ಯೂ ಪಾಯಿಂಟ್ ಕಡೆಯ ಗೇಟ್ಗೆ ಬೀಗ ಹಾಕಲಾಗಿತ್ತು. ಸರ್ಕಾರ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿದ ಬೆನ್ನಿಗೆ ಜೋಗ ಜಲಪಾತದ ವೀಕ್ಷಣೆಗೂ ಅವಕಾಶ ನೀಡಲಾಗಿದೆ.
ಮಳೆಗಾಲ ಆದ್ದರಿಂದ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಮೈದುಂಬಿಕೊಂಡಿವೆ. ನೀರು ಧುಮ್ಮಿಕ್ಕುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಜನರು ಬಂದಿದ್ದರು. ಆರಂಭದಲ್ಲೇ ಸುಮಾರು 991 ಪ್ರವಾಸಿಗರು ಜೋಗ ವೀಕ್ಷಿಸಿ, ಕಣ್ತುಂಬಿಕೊಂಡರು.

ಕೋವಿಡ್ ನಿಯಮ; ಜೋಗ ಜಲಪಾತ ಕಣ್ತುಂಬಿಕೊಳ್ಳಲು ಮಳೆಗಾಲದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಈಗ ಕೋವಿಡ್ ಇರುವುದರಿಂದ ಸರ್ಕಾರ ವಿಧಿಸಿರುವ ಕೆಲವು ಕಠಿಣ ನಿಯಮಗಳನ್ನು ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಆಗಾಗ ಸೂಚನೆಯನ್ನು ನೀಡಲಾಗುತ್ತಿದೆ.
ಪ್ರತಿ ದಿನ ಜೋಗದಲ್ಲಿ ಜಲಪಾತ ವೀಕ್ಷಣೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿರುವುದರಿಂದ ಜೋಗದಲ್ಲಿ ಮತ್ತೆ ಚಟುವಟಿಕೆಗೆ ಗರಿಗೆದರಿದೆ. ಫೋಟೊಗ್ರಾಫರ್ಗಳಿಗೆ, ಸುತ್ತಮುತ್ತಲ ಅಂಗಡಿಗಳಲ್ಲಿ ವ್ಯಾಪಾರ ಪುನಾರಂಭವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications