ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೈತರ ಹೋರಾಟದ ವೇಳೆ ಸಚಿವ ಕಾಗೋಡು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಜನವರಿ 14: ಹೊಸನಗರ ತಾಲೂಕಿನ ನಗರ ನಾಡಕಚೇರಿ ಎದುರು ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ.
ಕಾಗೋಡು ತಿಮ್ಮಪ್ಪರನ್ನು ಜೆಡಿಎಸ್ ಪಕ್ಷದಿಂದ ಮಂತ್ರಿ ಮಾಡಲು ಸಿದ್ಧ: ಎಚ್ಡಿಕೆ
ಹೋರಾಟದಲ್ಲಿ ಪಾಲ್ಗೊಂಡಿದ್ದ ಕಾಗೋಡು ತಿಮ್ಮಪ್ಪ ವಾಂತಿ ಮಾಡಿಕೊಂಡು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಆಗ ಸ್ಥಳಕ್ಕೆ ಬಂದ ವೈದ್ಯರು ಪ್ರಾಥಮಿಕ ಆರೈಕೆ ಮಾಡಿ ಸೂಕ್ತ ಚಿಕಿತ್ಸೆ ನೀಡಿ ನಗರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ನಿವೃತ್ತಿಯಾಗಬೇಡಿ ಎಂದು 85ರ ಕಾಗೋಡಿಗೆ ಅಭಿಮಾನಿಗಳು ಒತ್ತಾಯಿಸಿದ್ದೇಕೆ?
ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿರುವ ಕಾಗೋಡು ತಿಮ್ಮಪ್ಪ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
Comments
kagodu thimmappa hospital farmer shivamogga district news ಕಾಗೋಡು ತಿಮ್ಮಪ್ಪ ಆಸ್ಪತ್ರೆ ಶಿವಮೊಗ್ಗ ಜಿಲ್ಲಾಸುದ್ದಿ
English summary
Former Revenue Minister Kagodu Thimmappa has been admitted to Hospital. He collapsed while participating in farmers' struggle.
Story first published: Monday, January 14, 2019, 17:48 [IST]