Bhadravathi constituency; ಬಿಜೆಪಿಯ ಪ್ರಭಾವವೇ ಇಲ್ಲದ ಕ್ಷೇತ್ರವಿದು!
ಶಿವಮೊಗ್ಗ ನಗರದಿಂದ ಕೂಗಳತೆ ದೂರದಲ್ಲಿರುವ ಶಿವಮೊಗ್ಗ, ಚಿಕ್ಕಮಗಳೂರು ಜೊತೆ ಗಡಿ ಹಂಚಿಕೊಂಡಿರುವ ತಾಲೂಕು ಕೇಂದ್ರ ಭದ್ರಾವತಿ. ಹಿಂದೆ ಖ್ಯಾತ ಕೈಗಾರಿಕಾ ಪ್ರದೇಶವಾಗಿದ್ದ ಭದ್ರಾವತಿಯಲ್ಲಿ ಈಗ ಹಲವು ಕಾರ್ಖಾನೆಗಳು ಮುಚ್ಚಿವೆ. ಲಿಂಗಾಯತರು, ಒಕ್ಕಲಿಗರು, ಮುಸ್ಲಿಮರು ಹೆಚ್ಚಾಗಿ ಇರುವ ಕ್ಷೇತ್ರವಿದು. ಕೈಗಾರಿಕಾ ವಲಯವಾಗಿರುವ ಕಾರಣ ವಲಸಿಗರು ಹೆಚ್ಚಿದ್ದಾರೆ. ಉತ್ತಮವಾದ ರೈಲು, ಬಸ್ ಸಂಪರ್ಕ ಹೊಂದಿದೆ. ರೇಡಿಯೋ ಕೇಂದ್ರವೂ ಇಲ್ಲಿದೆ. ನಗರದಲ್ಲಿಯೇ ಭದ್ರಾ ನದಿ ಹರಿಯುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ದಿವಾನರಾಗಿದ್ದ ಸರ್. ಎಂ. ವಿಶ್ವೇಶ್ವರಯ್ಯ ಭದ್ರಾವತಿಯಲ್ಲಿ ಕಬ್ಬಿಣ ಮತ್ತು ಉಕ್ಕು ಕಾರ್ಖನೆ ಸ್ಥಾಪನೆ ಮಾಡಿದರು. ಹಲವು ಕುಟುಂಬಗಳಿಗೆ ಆಧಾರವಾಗಿದ್ದ ಕಾರ್ಖಾನೆ ಅವಸಾನದ ಅಂಚಿನಲ್ಲಿದೆ. ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕಾರ್ಮಿಕರು ನಡೆಸುತ್ತಿರುವ ಹೋರಾಟ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಲಿದೆ ಎಂದು ಅಂದಾಜಿಸಲಾಗಿದೆ. ಪಟ್ಟಣ್ಣದಲ್ಲಿದ್ದ ಎಂಪಿಎಂ ಈಗಾಗಲೇ ಬಾಗಿಲು ಹಾಕಿದೆ.

ಮಾಜಿ ಕ್ರಿಕೆಟರ್ ಜಿ. ಆರ್. ವಿಶ್ವನಾಥ್, ಹಿರಿಯ ನಟ ದೊಡ್ಡಣ್ಣ, ನಿರ್ದೇಶನ ಎಸ್. ನಾರಾಯಣ್, ನಟಿ ಆಶಾ ಭಟ್ ಸೇರಿದಂತೆ ಹಲವಾರು ಪ್ರಸಿದ್ಧ ವ್ಯಕ್ತಿಗಳ ತವರೂರು ಭದ್ರಾವತಿ. ಕೇಂದ್ರದ ಮಾಜಿ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಸಹ ಇಲ್ಲಿಯವರೇ 2013ರ ಚುನಾವಣೆಯಲ್ಲಿ ಸಿ. ಎಂ. ಇಬ್ರಾಹಿಂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 22,329 ಮತಗಳನ್ನು ಪಡೆದು, ಜೆಡಿಎಸ್ನ ಅಪ್ಪಾಜಿ ಗೌಡ ವಿರುದ್ಧ ಸೋಲು ಕಂಡಿದ್ದರು. ಠೇವಣಿಯನ್ನು ಸಹ ಕಳೆದುಕೊಂಡರು.
ಬಿಜೆಪಿ ಬಾವುಟ ಹಾರಲೇ ಇಲ್ಲ; ಶಿವಮೊಗ್ಗ ಜಿಲ್ಲೆ ಬಿಜೆಪಿಯ ಶಕ್ತಿ ಕೇಂದ್ರ. ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು 7, ಆರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆದರೆ ಅಚ್ಚರಿ ಎಂಬಂತೆ ಬಿಜೆಪಿಯ ಪ್ರಭಾವವೇ ಇಲ್ಲದ ಕ್ಷೇತ್ರ ಭದ್ರಾವತಿ. ಮೊದಲಿನಿಂದಲೂ ಇಲ್ಲಿ ಬಿಜೆಪಿ ಗೆದ್ದಿಲ್ಲ, ರಾಜಕೀಯದ ಆಳ ತಿಳಿದವರು ಗೆಲ್ಲುವುದೂ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ. ಪಕ್ಷಕ್ಕಿಂತ ವ್ಯಕ್ತಿ ರಾಜಕೀಯವೇ ಭದ್ರಾವತಿಯಲ್ಲಿ ಮುಖ್ಯ. ಆದರೆ ಕಳೆದ ಎಲ್ಲಾ ಚುನಾವಣೆಗಳಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ನ ಬಿ. ಕೆ. ಸಂಗಮೇಶ್ವರ, ಜೆಡಿಎಸ್ನ ದಿ. ಅಪ್ಪಾಜಿ ಗೌಡ ತಲಾ ಮೂರು ಬಾರಿ ಕ್ಷೇತ್ರದಲ್ಲಿ ಗೆದಿದ್ದಾರೆ. ಹಾಲಿ ಶಾಸಕರು ಬಿ. ಕೆ. ಸಂಗಮೇಶ್ವರ. 2020ರಲ್ಲಿ ಅಪ್ಪಾಜಿ ಗೌಡರು ವಿಧಿವಶರಾದರು. ಅವರು ಇಲ್ಲದೇ ನಡೆಯುತ್ತಿರುವ ಮೊದಲ ಚುನಾವಣೆ ಇದು. ಅಪ್ಪಾಜಿ ಗೌಡರ ಪತ್ನಿ ಶಾರದಾ ಅಪ್ಪಾಜಿ ಗೌಡ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿ ವರ್ಷಗಳು ಕಳೆದಿವೆ.

ಆರಂಭದಿಂದಲೂ ಭದ್ರಾವತಿ ಕಾಂಗ್ರೆಸ್ ಭದ್ರಕೋಟೆ. ಬಳಿಕ ಕಾರ್ಮಿಕ ಹೋರಾಟಗಳ ಮೂಲಕ ಮುಂಚೂಣಿಗೆ ಬಂದು ಮೂರು ಬಾರಿ ಗೆದ್ದರು ಅಪ್ಪಾಜಿ ಗೌಡ. 1994ರ ಚುನಾವಣೆಯಲ್ಲಿ ಅಪ್ಪಾಜಿ ಗೌಡ, ಬಿ. ಕೆ. ಸಂಗಮೇಶ್ವರ ನಡುವೆ ನೇರ ಪೈಪೋಟಿ ನಡೆಯಿತು. ಈ ಬಾರಿ ಭದ್ರಾವತಿ ಗೆಲ್ಲಲೇಬೇಕು ಎಂದು ಬಿಜೆಪಿ ಬಯಸಿದೆ. ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಮಲ ಆರಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ. ಆದರೆ ಭದ್ರಾವತಿ ಕೈ ಕೊಡುತ್ತಲೇ ಇದೆ.
1994ರಲ್ಲಿ ಬಿಜೆಪಿ ಅಭ್ಯರ್ಥಿ ನವೀನ್ ಕ್ಷೇತ್ರದಲ್ಲಿ 16,830 ಮತಗಳನ್ನು ಪಡೆದಿದ್ದರು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಡೆದ ಅತಿ ಹೆಚ್ಚು ಮತಗಳಿವು ಎಂದರೆ ಬಿಜೆಪಿ ಪ್ರಭಾವ ಎಷ್ಟಿದೆ? ಎಂದು ನೀವು ಲೆಕ್ಕಾಚಾರ ಹಾಕಬಹುದಾಗಿದೆ. 2020ರಲ್ಲಿ ಕೋವಿಡ್ನಿಂದಾಗಿ ಅಪ್ಪಾಜಿ ಗೌಡ ವಿಧಿವಶರಾದರು. ಅವರ ಪತ್ನಿ ಶಾರಾದಾ ಅಪ್ಪಾಜಿ ಗೌಡರನ್ನು ಬಿಜೆಪಿ ಅಭ್ಯರ್ಥಿ ಮಾಡುತ್ತದೆ ಎಂಬ ಮಾತುಗಳು ಕೇಳಿ ಬಂದವು. ಆದರೆ ಜೆಡಿಎಸ್ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಅವರು ಸಕ್ರಿಯರಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.
ಅಪ್ಪಾಜಿ ಗೌಡರ ಆಪ್ತ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ರನ್ನು ಬಿಜೆಪಿಗೆ ಸೆಳೆಯಲು ಪಕ್ಷ ಯಶಸ್ವಿಯಾಗಿದೆ. ಈ ಬಾರಿ ಅವರಿಗೆ ಟಿಕೆಟ್ ಎಂಬ ಮಾತಿದೆ. ಕಾಂಗ್ರೆಸ್ನಿಂದ ಹಾಲಿ ಶಾಸಕ ಬಿ. ಕೆ. ಸಂಗಮೇಶ್ವರ ಕಣಕ್ಕಿಳಿಯಬಹುದು, ಇಲ್ಲವಾದಲ್ಲಿ ಸಹೋದರ ಅಥವ ಪುತ್ರನನ್ನು ಕಣಕ್ಕಿಳಿಸಬಹುದು. ಆಮ್ ಆದ್ಮಿ ಸೇರಿದಂತೆ ಪಕ್ಷೇತರರು ಕಣಕ್ಕಿಳಿದರೂ ಯಾವುದೇ ಪ್ರಯೋಜನವಿಲ್ಲ, ಭಾರೀ ಪೈಪೋಟಿ ನಿರೀಕ್ಷೆ ಮಾಡುವುದು ಕಷ್ಟ ಎಂಬುದು ಜನರಿಗೂ ತಿಳಿದಿದೆ.
ಭದ್ರಾವತಿಯಲ್ಲಿ ಈಗ ಕಾರ್ಮಿಕರಿಲ್ಲ, ಕಾರ್ಮಿಕರ ನಾಯಕರಾಗಿದ್ದ ಅಪ್ಪಾಜಿ ಗೌಡರು ಇಲ್ಲ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳು ಇಲ್ಲದ ಹಳ್ಳಿಗಳು ಇವೆ. 7 ಚುನಾವಣೆಯಲ್ಲಿ ಕಣಕ್ಕಿಳಿದು ಮೂರು ಬಾರಿ ಗೆದ್ದಿದ್ದ ದಿ. ಅಪ್ಪಾಜಿ ಗೌಡರ ಪತ್ನಿ ಜೆಡಿಎಸ್ನ ಶಾರಾದಾ ಅಪ್ಪಾಜಿ ಗೌಡ ಜನತಾ ಜಲಧಾರೆ ಮತ್ತು ಪಂಚರತ್ನ ಯಾತ್ರೆಗಳನ್ನು ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಂಘಟಿಸಿದ್ದಾರೆ. ಈ ಮೂಲಕ ಈ ಬಾರಿ ಸ್ಪರ್ಧೆ ವಿಭಿನ್ನವಾಗಿರಲಿದೆ ಎಂಬ ಸಂದೇಶ ಕೊಟ್ಟಿದ್ದಾರೆ. ತಮ್ಮ ಕುಟುಂಬದ ಮೇಲೆ ಅಟ್ರಾಸಿಟಿ ಕೇಸು ದಾಖಲಾಗಲು ಯಡಿಯೂರಪ್ಪ ಕಾರಣ ಎಂದು ಶಾಸಕ ಬಿ. ಕೆ. ಸಂಗಮೇಶ್ವರ ಸದನದಲ್ಲಿ ಅಂಗಿ ಕಳಚಿ ಪ್ರತಿಭಟಿಸಿ ದೊಡ್ಡ ಸುದ್ದಿ ಮಾಡಿದ್ದರು.
ಮುಸ್ಲಿಮರು ಬಿಜೆಪಿ ಬೆಂಬಲಿಸದ ಕಾರಣ, ಯಡಿಯೂರಪ್ಪ ಈ ಬಾರಿ ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ಈ ಬಾರಿಯೂ ಭದ್ರಾವತಿಯಲ್ಲಿ ಬಿಜೆಪಿ ಬಾವುಟ ಹಾರುವುದು ಅನುಮಾನ. ಬಿ. ಕೆ. ಸಂಗಮೇಶ್ವರ ಆರೋಗ್ಯದ ಕಾರಣ ಚುನಾವಣೆಯಿಂದ ದೂರ ಉಳಿದರೂ ಸಹೋದರ ಕೌನ್ಸಿಲರ್ ಮೋಹನ್ ಅಥವ ಪುತ್ರ ಗಣೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು. ಸಿ. ಎಂ. ಇಬ್ರಾಹಿಂ ಸ್ಥಳೀಯ ಮುಸ್ಲಿಮರ ಮೇಲೆ ಪ್ರಭಾವ ಬೀರಿ ಶಾರಾದಾ ಅಪ್ಪಾಜಿ ಗೌಡ ಗೆಲ್ಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಒಟ್ಟು ಮತದಾರರು 213223. ಪುರುಷರು 103878, ಮಹಿಳೆಯರು 109345.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications