Get Updates
Get notified of breaking news, exclusive insights, and must-see stories!

ತ್ಯಾವರೆಕೊಪ್ಪದಿಂದ ಗುಜರಾತ್‌ಗೆ ಹೊರಟ 6 ಚಿರತೆಗಳು

ಶಿವಮೊಗ್ಗ, ಅಕ್ಟೋಬರ್ 29 : ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ 12 ಚಿರತೆಗಳು ಗುಜರಾತ್ ಮತ್ತು ಬೆಂಗಳೂರಿಗೆ ಹೊರಟು ನಿಂತಿವೆ. ಈಗಾಗಲೇ ಸಕ್ರೆಬೈಲು ಆನೆ ಬಿಡಾರದ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.

ಸಿಂಹಧಾಮದಲ್ಲಿ 6 ಮರಿಗಳು ಸೇರಿದಂತೆ 26 ಚಿರತೆಗಳಿವೆ. ಇವುಗಳಲ್ಲಿ 6 ಚಿರತೆಯನ್ನು ಅಹಮದಾಬಾದ್‌ನ ಕಮಲಾ ನೆಹರೂ ಜೈವಿಕ ಉದ್ಯಾನ ಮತ್ತು ಅಷ್ಟೇ ಸಂಖ್ಯೆಯ ಚಿರತೆಗಳನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕಳುಹಿಸಲಾಗುತ್ತಿದೆ.

Karnataka can hand over 6 leopard to Gujarat

ಸಿಂಹಧಾಮದಿಂದ 18 ಚಿರತೆಗಳನ್ನು ಬೇರೆ ಕಡೆಗೆ ಹಸ್ತಾಂತರ ಮಾಡಲಾಗುತ್ತಿದೆ. ಆದರೆ, ಮೈಸೂರು ಸಮೀಪದ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಅಹಮದಾಬಾದ್‌ ಮತ್ತು ಬೆಂಗಳೂರಿಗೆ ಚಿರತೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ.

ಆನೆಗಳು ಉತ್ತರ ಪ್ರದೇಶಕ್ಕೆ : ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ 22 ಆನೆಗಳಿವೆ. ಇವುಗಳಲ್ಲಿ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕೊಡುಗೆಯಾಗಿ ನೀಡಲಾಗುತ್ತದೆ. ಉತ್ತರ ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಈ ಆನೆಗಳನ್ನು ಕಳುಹಿಸಲಾಗುತ್ತಿದೆ.

ಪಾರ್ವತಿ, ಕಿರಣ (4), ಭಾಸ್ಕರ (5), ಅಮೃತಾ (13), ರಾಘವೇಂದ್ರ (30) ಆನೆಗಳನ್ನು ಕಳುಹಿಸಿ ಕೊಡಲಾಗುತ್ತದೆ. ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಸಕ್ರೆಬೈಲಿಗೆ ಬಂದಿದ್ದು, ತರಬೇತಿ ಪಡೆಯುತ್ತಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಆನೆಗಳು ಉತ್ತರ ಪ್ರದೇಶಕ್ಕೆ ಹೊರಡಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+