ತ್ಯಾವರೆಕೊಪ್ಪದಿಂದ ಗುಜರಾತ್ಗೆ ಹೊರಟ 6 ಚಿರತೆಗಳು
ಶಿವಮೊಗ್ಗ, ಅಕ್ಟೋಬರ್ 29 : ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ 12 ಚಿರತೆಗಳು ಗುಜರಾತ್ ಮತ್ತು ಬೆಂಗಳೂರಿಗೆ ಹೊರಟು ನಿಂತಿವೆ. ಈಗಾಗಲೇ ಸಕ್ರೆಬೈಲು ಆನೆ ಬಿಡಾರದ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.
ಸಿಂಹಧಾಮದಲ್ಲಿ 6 ಮರಿಗಳು ಸೇರಿದಂತೆ 26 ಚಿರತೆಗಳಿವೆ. ಇವುಗಳಲ್ಲಿ 6 ಚಿರತೆಯನ್ನು ಅಹಮದಾಬಾದ್ನ ಕಮಲಾ ನೆಹರೂ ಜೈವಿಕ ಉದ್ಯಾನ ಮತ್ತು ಅಷ್ಟೇ ಸಂಖ್ಯೆಯ ಚಿರತೆಗಳನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕಳುಹಿಸಲಾಗುತ್ತಿದೆ.

ಸಿಂಹಧಾಮದಿಂದ 18 ಚಿರತೆಗಳನ್ನು ಬೇರೆ ಕಡೆಗೆ ಹಸ್ತಾಂತರ ಮಾಡಲಾಗುತ್ತಿದೆ. ಆದರೆ, ಮೈಸೂರು ಸಮೀಪದ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಅಹಮದಾಬಾದ್ ಮತ್ತು ಬೆಂಗಳೂರಿಗೆ ಚಿರತೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ.
ಆನೆಗಳು ಉತ್ತರ ಪ್ರದೇಶಕ್ಕೆ : ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ 22 ಆನೆಗಳಿವೆ. ಇವುಗಳಲ್ಲಿ 5 ಆನೆಗಳನ್ನು ಉತ್ತರ ಪ್ರದೇಶಕ್ಕೆ ಕೊಡುಗೆಯಾಗಿ ನೀಡಲಾಗುತ್ತದೆ. ಉತ್ತರ ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಈ ಆನೆಗಳನ್ನು ಕಳುಹಿಸಲಾಗುತ್ತಿದೆ.
ಪಾರ್ವತಿ, ಕಿರಣ (4), ಭಾಸ್ಕರ (5), ಅಮೃತಾ (13), ರಾಘವೇಂದ್ರ (30) ಆನೆಗಳನ್ನು ಕಳುಹಿಸಿ ಕೊಡಲಾಗುತ್ತದೆ. ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಸಕ್ರೆಬೈಲಿಗೆ ಬಂದಿದ್ದು, ತರಬೇತಿ ಪಡೆಯುತ್ತಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಆನೆಗಳು ಉತ್ತರ ಪ್ರದೇಶಕ್ಕೆ ಹೊರಡಲಿವೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications