ಶಿವಮೊಗ್ಗ; ಮತಗಟ್ಟೆಗೆ ಬಂದು ಮತ ಹಾಕಿದ 101 ವರ್ಷದ ವೃದ್ಧೆ
ಶಿವಮೊಗ್ಗ, ಮೇ 10; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಗತಿಯಲ್ಲಿದೆ. ಬೆಳಗ್ಗೆಯಿಂದ ಉತ್ಸಾಹದಿಂದಲೇ ಜನರು ಮತದಾನ ಮಾಡುತ್ತಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ 101 ವರ್ಷದ ವೃದ್ಧೆಯೊಬ್ಬರು ಮತಗಟ್ಟೆಗೆ ಬಂದು ಮತದಾನ ಮಾಡಿ ಮಾದರಿ ಆದರು. ಕ್ಷೇತ್ರದ 157ನೇ ಬೂತ್ನಲ್ಲಿ ಅವಿನಹಳ್ಳಿ ನಿವಾಸಿ ಬಿಬಿ ಜಾನ್ ಮತ ಚಲಾವಣೆ ಮಾಡಿದರು.

ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಿತ್ತು. 80 ವರ್ಷ ಮೇಲ್ಪಟ್ಟ ಮತದಾರರು ಹಾಗೂ ವಿಕಲಚೇತನರು ಮನೆಯಲ್ಲಿ ಮತದಾನ ಮಾಡಲು ಅವಕಾಶವಿತ್ತು.
ಅರ್ಜಿ ನಮೂನೆ 12 ಡಿ ಅಡಿ ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ತೆರಳಿ ಚುನಾವಣಾಧಿಕಾರಿಗಳು ಮತದಾನ ಪ್ರಕ್ರಿಯೆ ನಡೆಸಿದ್ದಾರೆ. ಆದರೆ ಸಾಗರದಲ್ಲಿ 101 ವರ್ಷದ ಬಿಬಿ ಜಾನ್ ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ಅಂಗವಿಕಲರು ಮತದಾನ ಮಾಡಲು ಹೆಸರು ನೋಂದಾಯಿಸಿಕೊಂಡಿದ್ದರು. ಏಪ್ರಿಲ್ 29 ರಿಂದ ಮೇ 6ರ ತನಕ ಈ ಪ್ರಕ್ರಿಯೆ ನಡೆಯಿತು. ಹೆಸರು ನೋಂದಾಯಿಸಲ್ಪಟ್ಟ 2374 ಮತದಾರರ ಪೈಕಿ 2237 ಜನರು ಮತದಾನ ಮಾಡಿದರು.
ದಾವಣಗೆರೆ ವರದಿ; ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ದುರ್ವಿಗೆರೆ ಗ್ರಾಮದ ಮತಗಟ್ಟೆ ಸಂಖ್ಯೆ 254 ರಲ್ಲಿ 106 ವರ್ಷದ ಶತಾಯುಷಿ ಜಾನಕಿಬಾಯಿ ಮತದಾನ ಮಾಡಿದರು.
ಹಗರಿಬೊಮ್ಮನಹಳ್ಳಿಯ ಮೋರಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಿಗೇರಿ ಗ್ರಾಮದ ಮತಗಟ್ಟೆ ಸಂಖ್ಯೆ 124ರಲ್ಲಿ ವೃದ್ಧರು, ಅಂಗವಿಕಲರು ಮತದಾನ ಮಾಡಿದರು.
ಬೆಂಗಳೂರು ನಗರದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಕೇಂದ್ರೀಯ ವಿದ್ಯಾಲಯದ 157ನೇ ಸಂಖ್ಯೆ ಮತಗಟ್ಟೆಯಲ್ಲಿ 84 ವರ್ಷದ ನಾಗಲಕ್ಷ್ಮೀ ಹಕ್ಕು ಚಲಾಯಿಸಿದರು.
ಮಂಡ್ಯದ ಕೊಪ್ಪಲುವಿನಲ್ಲಿ 106ರ ಮತಗಟ್ಟೆಯಲ್ಲಿ 102 ವರ್ಷದ ದೇವಿರಮ್ಮ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications