ಭದ್ರಾವತಿ ಎಂಪಿಎಂ ಖಾಸಗೀಕರಣ; ಸರ್ಕಾರದಿಂದ ಟೆಂಡರ್ ಆಹ್ವಾನ
ಶಿವಮೊಗ್ಗ, ಸೆಪ್ಟೆಂಬರ್ 09: ಭದ್ರಾವತಿಯಲ್ಲಿರುವ ಮೈಸೂರು ಪೇಪರ್ ಮಿಲ್ಸ್ ನವೀಕರಣ, ನಿರ್ವಹಣೆಗೆ ರಾಜ್ಯ ಸರ್ಕಾರ ಟೆಂಡರ್ ಆಹ್ವಾನಿಸಿದೆ. ಈ ಮೂಲಕ ಖಾಸಗಿಗೆ ವಹಿಸಲು ಮೊದಲ ಹೆಜ್ಜೆ ಇಟ್ಟಂತಾಗಿದೆ.
Recommended Video
ಸೆಪ್ಟೆಂಬರ್ 2ರಂದು ರಾಜ್ಯ ಸರ್ಕಾರ ಟೆಂಡರ್ ಅಧಿಸೂಚನೆ ಹೊರಡಿಸಿದೆ. ಸೆ.12ರ ತನಕ ಟೆಂಡರ್ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಮತ್ತು ಜಾಗತಿಕವಾಗಿ ಯಾರು ಬೇಕಾದರೂ ಟೆಂಡರ್ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.
ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದೆ. ಟೆಂಡರ್ ಪ್ರಕ್ರಿಯೆ ಅಂತಿಮಗೊಂಡ ಬಳಿಕ ಆಯ್ಕೆಯಾಗುವ ಕಂಪನಿ ಜೊತೆ ಮಾತುಕತೆ ನಡೆಸುವಾಗ ಸಣ್ಣ-ಪುಟ್ಟ ಬದಲಾವಣೆಗಳನ್ನು ಮಾಡಲಾಗುತ್ತದೆ. 4 ವರ್ಷಗಳ ಬಳಿಕ ಎಂಪಿಎಂ ಕಾರ್ಖಾನೆ ಪುನಃ ಆರಂಭವಾಗುವ ನಿರೀಕ್ಷೆ ಹುಟ್ಟಿದೆ.

ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಮತ್ತು ಭೂಮಿ ಎಂಪಿಎಂ ಹೆಸರಿನಲ್ಲಿಯೇ ಇರಲಿದೆ. ನವೀಕರಣಕ್ಕೆ ಟೆಂಡರ್ ಪಡೆಯುವ ಕಂಪನಿ ಕಾರ್ಮಿಕರ ನೇಮಕ, ವೇತನ, ಎಲ್ಲವನ್ನೂ ನಿರ್ವಹಣೆ ಮಾಡಬೇಕಿದೆ. ಸುಮಾರು 1 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಟೆಂಡರ್ ಪಡೆಯುವ ಕಂಪನಿ ನವೀಕರಣಕ್ಕೆ ಕನಿಷ್ಠ 1 ಸಾವಿರ ಕೋಟಿ ಹೂಡಿಕೆ ಮಾಡಬೇಕು. ಆರಂಭದಲ್ಲಿ 1 ಸಾವಿರ ಉದ್ಯೋಗ ಸೃಷ್ಟಿಯಾಗಬೇಕು. ಟೆಂಡರ್ ಪ್ರಕ್ರಿಯೆಗಳು ಅಂತ್ಯಗೊಂಡ 3 ತಿಂಗಳಿನಲ್ಲಿ ಉತ್ಪಾದನೆ ಆರಂಭಿಸಬೇಕು.
ಎಂಪಿಎಂ ವಾರ್ಷಿಕ ಸುಮಾರು 450 ಕೋಟಿ ರೂ. ವಹಿವಾಟು ಮಾಡುತ್ತಿತ್ತು. 600 ಕೋಟಿ ರೂ. ನಷ್ಟವಾಗಿದೆ ಎಂಬ ನೆಪವನ್ನು ಹೇಳಿ 4 ವರ್ಷಗಳ ಹಿಂದೆ ಕಾರ್ಖಾನೆ ಮುಚ್ಚಲಾಗಿದೆ. ಈಗ ರಾಜ್ಯ ಸರ್ಕಾರ ವಿಶೇಷ ಆಸಕ್ತಿವಹಿಸಿ ಟೆಂಡರ್ ಕರೆದಿದೆ.
ಖಾಸಗೀಕರಣಕ್ಕೆ ವಿರೋಧ: ಎಸ್. ಎಂ. ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಎಂಪಿಎಂ ಖಾಸಗೀಕರಣ ಮಾಡುವ ಪ್ರಸ್ತಾಪ ಕೇಳಿ ಬಂದಿತ್ತು. ಆಗ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ವಿರೋಧ ವ್ಯಕ್ತಪಡಿಸಿದ್ದರು.
ಕಾರ್ಖಾನೆಯನ್ನು ಸರ್ಕಾರಕ್ಕೆ ನಡೆಸಲು ಸಾಧ್ಯವಾಗದಿದ್ದರೆ ಖಾಸಗಿ ಅವರಿಗೆ ವಹಿಸಿ ಎಂದು ಕಾರ್ಮಿಕರು ಮನವಿ ಮಾಡಿದ್ದರು. ಮುಚ್ಚಿದ ಕಾರ್ಖಾನೆಯನ್ನು ತೆಗೆದು, ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದ್ದರು.
ಭದ್ರಾವತಿಯಲ್ಲಿ ಎಂಪಿಎಂ ಕಾರ್ಖಾನೆ ಮತ್ತು ಅದರ ಟೌನ್ ಶಿಪ್ ಭೂಮಿ ಸುಮಾರು 500 ಎಕರೆಯಷ್ಟಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ 75 ಸಾವಿರ ಎಕರೆ ಭೂಮಿಯನ್ನು ಕಾಗದ ಉತ್ಪಾದನೆಯ ಪ್ರಮುಖ ಕಚ್ಚಾ ವಸ್ತು ಅಕೇಶಿಯಾ ಬೆಳೆಯಲು ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications