ಶರಾವತಿ ಭೂಗರ್ಭ ಸರ್ವೇ ಕಾರ್ಯಕ್ಕೆ ನ.4ರವರೆಗೂ ಮತ್ತೆ ತಡೆ
ಶಿವಮೊಗ್ಗ, ಅಕ್ಟೋಬರ್ 23: ಶರಾವತಿ ಕಣಿವೆಯಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆಯ ಭೂಗರ್ಭ ಸಮೀಕ್ಷೆ ನಡೆಸಲು, ಭೂಮಿ ಕೊರೆಯಲು ಆರಂಭಿಸಿದ್ದ ರಾಜ್ಯ ವಿದ್ಯುತ್ ನಿಗಮಕ್ಕೆ ಹೈಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿದ್ದು, ಇದೀಗ ಪುನಃ ಗಡುವನ್ನು ಮುಂದುವರಿಸಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ತಂದಿದೆ.
ಗೇರುಸೊಪ್ಪ ಹಿನ್ನೀರಿನಿಂದ ತಲಕಳಲೆ ಡ್ಯಾಂಗೆ ಪೈಪ್ ಮೂಲಕ ನೀರನ್ನು ಮೇಲೆತ್ತಿ, ಅಲ್ಲಿಂದ ಹಿರೇಹೆನ್ನಿ ಬಳಿ ಪವರ್ ಸ್ಟೇಷನ್ ನಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ನೀರನ್ನು ಪುನಃ ಪಂಪ್ ಮಾಡಿಕೊಂಡು ಸಂಗ್ರಹಿಸಿಡುವ ವಿಶಿಷ್ಟ ಯೋಜನೆಗಾಗಿ ಕೆಪಿಸಿಎಲ್ ಅಧಿಕಾರಿಗಳು ಭಾರದ ಎಂಜಿನ್ಗಳನ್ನು ಹಿರೇಹೆನ್ನಿ ಕಾಡಲ್ಲಿಳಿಸಿ ಡ್ರಿಲ್ ಮಾಡಲು ಆರಂಭಿಸಿದ್ದರು.
ಯೋಜಿತ ಸ್ಥಳ 1400 ಅಡಿಯಷ್ಟು ಆಳದಲ್ಲಿರುವುದರಿಂದ ಕಲ್ಲಿನ ರಚನೆ ತಿಳಿಯಲು ಅಧಿಕಾರಿಗಳು ಡ್ರಿಲ್ ಮಾಡಲು ಮುಂದಾಗಿದ್ದರು. ಸಿಂಹಬಾಲದ ಸಿಂಗಳೀಕಗಳನ್ನು ಹೊಂದಿರುವ ಶರಾವತಿ ಕಣಿವೆ ಇಂತಹ ಯೋಜನೆಗಳಿಂದ ಅವಸಾನದತ್ತ ಸಾಗಿದೆ. ತಕ್ಷಣ ಡ್ರಿಲ್ಲಿಂಗ್ ಕೆಲಸ ನಿಲ್ಲಿಸಬೇಕು ಎಂದು ಎಡ್ವರ್ಡ್ ಸಂತೋಷ್ ಮಾರ್ಟಿನ್ ಎಂಬುವರು ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು.

ಈ ಹಿಂದೆ ಕೆಪಿಸಿಎಲ್ ಅಧಿಕಾರಿಗಳು ಡ್ರಿಲ್ಲಿಂಗ್ ಕೆಲಸವನ್ನು ಅಕ್ಟೋಬರ್ 16ರವರೆಗೆ ನಿಲ್ಲಿಸುವುದಾಗಿ ಹೇಳಿದ್ದರು. ಈಗ ಈ ಗಡುವನ್ನ ನವೆಂಬರ್ 4ರವರೆಗೆ ವಿಸ್ತರಿಸಿ ಹೈಕೋರ್ಟ್ ಮತ್ತೊಮ್ಮೆ ಮಧ್ಯಂತರ ಆದೇಶ ನೀಡಿದೆ. ರಾಜ್ಯ ಸರ್ಕಾರ 2x2 ಅಳತೆಯ 12 ಬೋರ್ ಹೋಲ್ಗಳನ್ನು ತೆಗೆಯಲು ಕೆಪಿಸಿಎಲ್ ಅಧಿಕಾರಿಗಳಿಗೆ ಸೂಚಿಸಿತ್ತು. ಈ ಹಿಂದೆ ಎರಡು ಬಾರಿ ಹೈಕೋರ್ಟ್ ತಡೆ ಆದೇಶ ನೀಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications