ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್; ಲಾಂಛನ ಬಿಡುಗಡೆ
ಶಿವಮೊಗ್ಗ, ಮಾರ್ಚ್ 05: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ಮಾರ್ಚ್ 20ರಂದು ರೈತ ಮಹಾ ಪಂಚಾಯತ್ ನಡೆಯಲಿದೆ. ಮಹಾ ಪಂಚಾಯತ್ನ ಲಾಂಛನವನ್ನು ಹಿರಿಯ ರೈತ ಮುಖಂಡ ಕಡಿದಾಳು ಶಾಮಣ್ಣ ಬಿಡುಗಡೆ ಮಾಡಿದರು.
ಶುಕ್ರವಾರ ಲಾಂಛನ ಬಿಡುಗಡೆ ಮಾಡಿದ ಮಾತನಾಡಿದ ಕಡಿದಾಳು ಶಾಮಣ್ಣ, "ರೈತ, ದಲಿತ ಸಂಘಟನೆಗಳು ಒಗ್ಗೂಡಿ ಸಮಾವೇಶ ಮಾಡಲಾಗುತ್ತಿದೆ. ನನ್ನ ಕನಸು ಈಡೇರಿದೆ, ಚಳವಳಿ ಯಶಸ್ವಿ ಆಗಲಿ. ಹೋರಾಟಕ್ಕೆ ಜಯವಾಗಲಿ" ಎಂದು ಆಶಯ ವ್ಯಕ್ತಪಡಿಸಿದರು.
ರೈತ ಮುಖಂಡ ಕೆ. ಟಿ. ಗಂಗಾಧರ್ ಮಾತನಾಡಿ, "ರಾಜಕೀಯ ಪಕ್ಷಗಳು ರೈತರನ್ನು ಮತಬ್ಯಾಂಕ್ ಆಗಿ ಪರಿವರ್ತಸಿಕೊಂಡಿದ್ದಾರೆ. ಭೂಮಿ, ಆಹಾರ, ಸಂಗ್ರಹಣೆಯನ್ನು ಖಾಸಗೀಕರಣ ಮಾಡಿ, ಈ ವಿಚಾರಗಳನ್ನು ಭಾರತ ಸರ್ಕಾರ ಚುನಾವಣಾ ವಸ್ತುವನ್ನಾಗಿ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸಬೇಕು ಅಂತಾ ಹೋರಾಟ ಮಾಡುತ್ತಿಲ್ಲ. ನಮ್ಮ ಹಕ್ಕುಗಳನ್ನು ಜೋಪಾನ ಮಾಡಿಕೊಳ್ಳುತ್ತಿದ್ದೇವೆ. ಆರ್ಎಸ್ಎಸ್ ಕೂಡ ನಮ್ಮ ಪರವಾಗಿದೆ" ಎಂದರು.

ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಮಾತನಾಡಿ, "ಮೋದಿ ಅವರಿಗೆ ಧನ್ಯವಾದ ಹೇಳುತ್ತಿದ್ದೇನೆ. ದೇಶದಲ್ಲಿ ಮತ್ತೊಂದು ರೈತ ಚಳವಳಿ ಹುಟ್ಟಲು ಅವರು ಕಾರಣವಾಗಿದ್ದಾರೆ. ಗುಂಡೂರಾವ್ ಅವರ ಸರ್ಕಾರದ ಅವಧಿಯಲ್ಲಿ ನರಗುಂದ, ನವಲಗುಂದ ಘಟನೆಯಿಂದ ರೈತ ಚಳವಳಿ ಆರಂಭಕ್ಕೆ ಕಾರಣವಾಗಿದ್ದರು. ಆದರೆ ಇವತ್ತು ನಡೆಯುತ್ತಿರುವುದು ಬರೀ ರೈತ ಚಳವಳಿಯಲ್ಲ. ಸಾಮಾನ್ಯ ಜನರೂ ಹೋರಾಟಕ್ಕೆ ಇಳಿದಿದ್ದಾರೆ" ಎಂದು ಹೇಳಿದರು.
"ಈಗ ಮೂರು ಕಾಯ್ದೆಗಳು ಜಾರಿಯಾದರೆ ಜನರು ಅನ್ನ ಇಲ್ಲದೆ ಸಾಯುವಂತಾಗುತ್ತದೆ. ಹಾಗಾಗಿ ಎಲ್ಲಾ ಸಮುದಾಯದ ಮಠಗಳು, ಸ್ವಾಮೀಜಿಗಳು, ಜನಪರ ಇರುವವರು ಹೋರಾಟಕ್ಕೆ ಬೆಂಬಲ ನೀಡಬೇಕು. ಈ ಚಳವಳಿಯಲ್ಲಿ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ಡಾ. ದರ್ಶನ್ ಪಾಲ್, ಜಗಮೋಹನ್ ಸಿಂಗ್ ಸೇರಿದಂತೆ ಹಲವರು ಮಹಾ ಪಂಚಾಯತ್ನಲ್ಲಿ ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.
ಕೆ. ಎಲ್. ಅಶೋಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಂದರೇಶ್, ಕೆ. ಪಿ. ಶ್ರೀಪಾಲ್, ಡಿಎಸ್ಎಸ್ ಮುಖಂಡ ಹಾಲೇಶಪ್ಪ, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್. ಸಿ. ಯೋಗೇಶ್ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಇದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications