ಕೆಜೆಪಿ ಅಧ್ಯಕ್ಷ ಹುದ್ದೆ ಮುಗಿದ ಅಧ್ಯಾಯ : ಯಡಿಯೂರಪ್ಪ
ಶಿವಮೊಗ್ಗ, ಜ.6 : ಕೆಜೆಪಿ ಅಧ್ಯಕ್ಷ ಹುದ್ದೆಯದ್ದು ಮುಗಿದ ಅಧ್ಯಾಯ, ಕೆಜೆಪಿ-ಬಿಜೆಪಿ ವಿಲೀನಕ್ಕೆ ಅವಕಾಶ ನೀಡಬಾರದು ಎಂದು ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್ ಮನವಿ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚುನಾವಣಾ ಆಯೋಗವೇ ತಾವು ಅಧ್ಯಕ್ಷ ಎಂದು ಸ್ಪಷ್ಟನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಜೆಪಿ ಅಧ್ಯಕ್ಷರು ಯಾರು ಎಂದು ಕೇಂದ್ರ ಚುನಾವಣಾ ಆಯೊಗವೇ ತೀರ್ಪು ನೀಡಿದೆ. ತಾವು ಕೆಜೆಪಿ ಅಧ್ಯಕ್ಷ ಎಂದು ಆಯೋಗ ನೀಡಿದ ದಾಖಲೆಗಳು ನಮ್ಮ ಬಳಿ ಇವೆ. ಆದ್ದರಿಂದ ಈ ಬಗ್ಗೆ ಈಗ ಯಾವುದೇ ಗೊಂದಲಗಳು ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಬಿಜೆಪಿ-ಕೆಜೆಪಿ ವಿಲೀನ ವಿರೋಧಿಸಿ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದೊಂದು ಮುಗಿದ ಅಧ್ಯಾಯವಾಗಿದ್ದು, ವಿಲೀನಗೊಳಿಸುವುದಕ್ಕೆ ಪ್ರಸನ್ನ ಪದ್ಮನಾಭ ಆಕ್ಷೇಪ ವ್ಯಕ್ತಪಡಿಸಿರುವುದರಲ್ಲಿ ಅರ್ಥವಿಲ್ಲ ಎಂದರು. [ಕೆಜೆಪಿ-ಬಿಜೆಪಿ ವಿಲೀನಕ್ಕೆ ಪ್ರಸನ್ನ ಕುಮಾರ್ ಅಡ್ಡಗಾಲು]
ರಾಜ್ಯದ ಎಲ್ಲ ವರ್ಗದ ಜನರ ಅಭಿಪ್ರಾಯ, ಅಪೇಕ್ಷೆಯಂತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದೇನೆ. ಕೆಜೆಪಿಯನ್ನು ವಿಸರ್ಜನೆ ಮಾಡಿ, ಬಿಜೆಪಿಯಲ್ಲಿ ವಿಲೀನಗೊಳಿಸಲಾಗಿದೆ. ಕೆಜೆಪಿಯಿಂದ ಬಿಜೆಪಿಗೆ ವಾಪಸ್ ಆದ ಎಲ್ಲಾ ಬೆಂಬಲಿಗರಿಗೆ ಉತ್ತಮ ಸ್ಥಾನಮಾನ ದೊರೆಯಲಿದೆ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಬಿಜೆಪಿಗೆ ಮರಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳಿರಬಹುದು ಆದರೆ, ತಾವು ಪಕ್ಷಕ್ಕೆ ಮರಳುವುದಿಲ್ಲ ಎಂದು ಕೆಜೆಪಿ ಉಪಾಧ್ಯಕ್ಷ ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಯಡಿಯೂರಪ್ಪ ಅವರ ಮೇಲೆ ಗೌರವವಿದೆ. ಆದರೆ, ತಾವು ಪಕ್ಷಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ನಿಲುವು ಏನೇ ಆಗಿರಬಹುದು. ಆದೆರೆ, ತಾವು ಮತ್ತು ತಮ್ಮ ಬೆಂಬಲಿಗರು ಬಿಜೆಪಿಗೆ ಮರಳುವುದಿಲ್ಲ. ಬೆಂಬಲಿಗರು ಮತ್ತು ಹಿತೈಷಿಗಳೊಂದಿಗೆ ಚರ್ಚೆ ಮಾಡಿ ಮುಂದಿನ ರಾಜಕೀಯ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಆದರೆ, ಬಿಜೆಪಿಗೆ ಮರಳುವುದಿಲ್ಲ ಎಂದು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications