ಚಂಪಾ ಸಿದ್ದರಾಮಯ್ಯನವರ ಚಮಚಾ ಎಂದ ಈಶ್ವರಪ್ಪ
Recommended Video

ಶಿವಮೊಗ್ಗ, ನವೆಂಬರ್ 27 : ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವ ಚಂಪಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಮಚಾ" ಎಂದು ಟೀಕಿಸಿದರು.

ಸಾಹಿತಿಗಳ ಕುಲಕ್ಕೆ ಚಂಪಾ ಅಪಮಾನ ಮಾಡಿದ್ದಾರೆ. ಸಮ್ಮೇಳನದ ವೇದಿಕೆಯಲ್ಲಿ ಸಲ್ಲದ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಪೇಜಾವರ ಸ್ವಾಮೀಜಿ, ಹಿಂದೂ ಧರ್ಮ, ಭಾರತ ಮಾತೆಯ ಬಗ್ಗೆ ಚಂಪಾ ಟೀಕೆ ಮಾಡಿದ್ದಾರೆ. ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಇಂತಹ ಹೇಳಿಕೆ ನೀಡುವ ಮೂಲಕ ಚಂಪಾ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿರುವಂತಿದೆ. ಅದಕ್ಕಾಗಿಯೇ ಅವರು ಹಿಂದೂ ಧರ್ಮವನ್ನು ಟೀಕಿಸಿದ್ದಾರೆ. ಸಮ್ಮೇಳನದ ಅಧ್ಯಕ್ಷರಾಗಲು ಅಯೋಗ್ಯರು ಎಂದು ಕಿಡಿ ಕಾರಿದರು.
ಸಮ್ಮೇಳನವನ್ನು ದುರುಪಯೋಗ ಮಾಡಿಕೊಂಡ ಚಂಪಾ ರಾಜ್ಯದ ಜನರ ಕ್ಷಮೆಯಾಚಿಸಬೇಕು. ರಾಜ್ಯದಲ್ಲಿ ಪ್ರಾಮಾಣಿಕ ಸಾಹಿತಿಗಳು ಬೇಕಾದಷ್ಟು ಮಂದಿ ಇದ್ದಾರೆ ಅವರು ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಹಿಂದೂಗಳ ಕಗ್ಗೊಲೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಹಿಂದೂ ಮುಖಂಡರನ್ನು ಹತ್ಯೆಗೈದವರ ಮತ್ತು ಅವರಿಗೆ ಸಹಕಾರ ನೀಡಿದವರ ಬೆಂಬಲಕ್ಕೆ ಸರ್ಕಾರ ನಿಂತಿದೆ. ಹತ್ಯೆ ಪ್ರಕರಣಗಳಲ್ಲಿ ಆರೋಪ ಹೊತ್ತಿರುವ ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ವಿನಯ್ ಕುಲಕರ್ಣಿ ಅವರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಂತಿದ್ದಾರೆ ಎಂದು ಆಕ್ರೊಶ ವ್ಯಕ್ತಪಡಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications